ಚಿಕ್ಕಮಗಳೂರು: ಕೋಳಿ ಮೊಟ್ಟೆ ನುಂಗಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಲಕ್ಷ್ಮಣ ಪೂಜಾರಿ ಎಂಬುವರು ಸಾಕಿದ್ದ ಕೋಳಿಯ ಮೊಟ್ಟೆಗಳನ್ನು ನುಂಗಿ ಮನೆಯ ಪಕ್ಕದ ಬಿಲದಲ್ಲಿ ಅವಿತಿದ್ದ ನಾಗರಹಾವನ್ನು ಉರಗ ತಜ್ಞ ಆರೀಫ್ ಸುರಕ್ಷಿತವಾಗಿ ಸೆರೆ ಹಿಡಿದು ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.