ವಿಧಾನ ಪರಿಷತ್ನಲ್ಲಿ ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ನಡೆದಿದೆ: ಸ್ಪೀಕರ್ ಕಾಗೇರಿ - ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ವಿಧಾನ ಪರಿಷತ್ನಲ್ಲಿ ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ನಡೆದಿದೆ. ಈ ರೀತಿಯ ಘಟನೆ ನಡೆಯದಂತೆ ಜವಾಬ್ದಾರಿ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವಕ್ಕೆ ಶಕ್ತಿ ತುಂಬಿಸುವ ಕೆಲಸ ಮಾಡಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ವಿಧಾನ ಪರಿಷತ್ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ದೋಷಾರೋಪ ಮಾಡೋದಕ್ಕೆ ಸಾಕಷ್ಟು ವಿಷಯ, ವ್ಯಕ್ತಿಗಳು ಸಿಗ್ತಾರೆ. ಅದರಿಂದ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ. ಸ್ವಯಂ ಶಿಸ್ತಿನ ಪಾಲನೆಗೆ ನಾವೆಲ್ಲಾ ಒಗ್ಗಿಕೊಳ್ಳಬೇಕು ಎಂದರು.