ಕರ್ನಾಟಕ

karnataka

By

Published : Feb 5, 2020, 2:42 PM IST

ETV Bharat / videos

ಶಾಹೀನ್ ಶಿಕ್ಷಣ ಸಂಸ್ಥೆ ವಿರುದ್ಧ ದೇಶ ದ್ರೋಹದ ಕೇಸ್: ಮಹಿಳಾ ಕಾಂಗ್ರೆಸ್​ ಪ್ರತಿಭಟನೆ...!

ಬೀದರ್: ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರವನ್ನಿಟ್ಟಕೊಂಡು ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ ಮಾಡಿದ್ದ ಶಾಹೀನ್ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಯ ವಿರುದ್ಧ ದೇಶದ್ರೊಹ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಸರ್ಕಾರದ ಈ ಕ್ರಮ ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು.ನಗರದ ಅಂಬೇಡ್ಕರ್​ ವೃತದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹಾಗೂ ಜಿಲ್ಲಾಧ್ಯಕ್ಷೆ ಮೀನಾಕ್ಷಿ ಸಂಗ್ರಾಮ ಅವರ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ABOUT THE AUTHOR

...view details