ಗದಗದಲ್ಲಿ ಭಾರಿ ಗಾಳಿ, ಮಳೆಗೆ ನೆಲಕಚ್ಚಿದ ಕಬ್ಬು - ಗದಗ ಜಿಲ್ಲೆಯಲ್ಲಿ ಮಳೆಯಿಂದ ಕಬ್ಬು ಬೆಳೆ ನಾಶ
ಗದಗ ಜಿಲ್ಲೆಯಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಗೆ ಜಿಲ್ಲೆಯ ಶಾಗೋಟಿ ಗ್ರಾಮದಲ್ಲಿ ಕಬ್ಬಿನ ಬೆಳೆ ಸಂಪೂರ್ಣ ನೆಲಕಚ್ಚಿದೆ. ಗ್ರಾಮದ ಬಸನಗೌಡ ಮರಿಗೌಡರ ಎಂಬುವರು 2 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಕೃಷಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಪರಿಹಾರ ನೀಡಬೇಕು ಎಂದು ರೈತ ಮನವಿ ಮಾಡಿಕೊಂಡಿದ್ದಾರೆ.