ಕರ್ನಾಟಕ

karnataka

ಶಾಸಕರ ಮನೆ ಮೇಲೆ ದಾಳಿ ಪ್ರಕರಣ: ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್

By

Published : Aug 14, 2020, 9:59 AM IST

ಬಳ್ಳಾರಿ: ಬೆಂಗಳೂರಿನ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣದ 89 ಆರೋಪಿಗಳನ್ನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಬಂಧಿತರೆಲ್ಲರನ್ನೂ ಕೂಡ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ.‌ ನಿನ್ನೆ ತಡರಾತ್ರಿಯೇ ಮೂರು ಬಸ್​ಗಳಲ್ಲಿ ಆರೋಪಿಗಳನ್ನು ಕರೆ ತರಲಾಗಿದೆ.

ABOUT THE AUTHOR

...view details