ಕರ್ನಾಟಕ

karnataka

By

Published : Mar 23, 2020, 7:46 PM IST

ETV Bharat / videos

ಗುಂಪು ಗುಂಪಾಗಿ ಸಂಚರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು: ಶಾಸಕ ಡಾ.ಭರತ್ ಶೆಟ್ಟಿ ವೈ

ಮಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು ಮುಂದಿನ ದಿನಗಳು ನಿರ್ಣಾಯಕವಾಗಲಿದೆ. ಸಾರ್ವಜನಿಕರು ಬಸ್, ರೈಲುಗಳಲ್ಲಿ ಗುಂಪು ಗುಂಪಾಗಿ ಸಂಚರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮುಂದಿನ 15 ರಿಂದ 20 ದಿನಗಳ ಕಾಲ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬರಬೇಕು. ಹೀಗಾದಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ ವಿರುದ್ಧ ಭಾರತ ಗೆಲ್ಲಬಹುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಸ್ವಸ್ಥ ಭಾರತವನ್ನು ನಿರ್ಮಿಸಲು ಕೈಜೋಡಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.

ABOUT THE AUTHOR

...view details