ಗುಬ್ಬಿಯಲ್ಲಿ ಮೂವರ ಸಜೀವ ದಹನ: ಭೀಕರ ಅಪಘಾತದ ಬಗ್ಗೆ ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ - witness gives information of accident
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಕೆರೆ ಏರಿ ಮೇಲೆ ಇಂದು ಮುಂಜಾನೆ ಖಾಸಗಿ ಬಸ್ ಹಾಗೂ ಮಾರುತಿ ಓಮ್ನಿ ವ್ಯಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಜೀವ ದಹನಗೊಂಡಿದ್ದಾರೆ. ಮಾರುತಿ ವ್ಯಾನ್ನಲ್ಲಿದ್ದ ಗಾಯಾಳು ನರಸಿಂಹ ಮೂರ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ಕುರಿತಂತೆ 'ಈಟಿವಿ ಭಾರತ'ಕ್ಕೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.