ತೆಂಗಿನಕಾಯಿ ಅಂಗಡಿಯಲ್ಲಿ 70 ಸಾವಿರ ದೋಚಿದ ಕಳ್ಳರು: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಬೆಂಗಳೂರಿನ ಕೆಆರ್ಪುರದ ತೆಂಗಿನಾಯಿ ಅಂಗಡಿಯಲ್ಲಿ ಕಳ್ಳತನ
ಕೆ.ಆರ್.ಪುರ: ತಡರಾತ್ರಿ ತೆಂಗಿನಕಾಯಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 70 ಸಾವಿರ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ವೈಟ್ಪೀಲ್ಡ್ ವಿಭಾಗದ ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯ್ ಕುಮಾರ್ ಎಂಬುವವರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಬೆಳಗ್ಗೆ ಬಂದ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಖದೀಮರ ಕೃತ್ಯ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Last Updated : Feb 3, 2023, 8:21 PM IST