ಕರ್ನಾಟಕ

karnataka

By

Published : Sep 13, 2022, 1:08 PM IST

ETV Bharat / videos

ಏಕಾಏಕಿ ಹೊತ್ತಿ ಉರಿದ ಐಷಾರಾಮಿ ಕಾರು.. ರಕ್ಷಣೆಗೆ ದಾವಿಸಿದ ಸಿಎಂ

ಮುಂಬೈ(ಮಹಾರಾಷ್ಟ್ರ): ಮುಂಬೈನ ವೆಸ್ಟರ್ನ್​​ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಮಂಗಳವಾರ ನಸುಕಿನ ಜಾವ ಐಷಾರಾಮಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಎದುರುಗಡೆ ರಸ್ತೆಯಿಂದ ತೆರಳುತ್ತಿದ್ದ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಕಾರು ನಿಲ್ಲಿಸಿ, ಪ್ರಯಾಣಿಕರಿಗೆ ಸಹಾಯ ಮಾಡಿದ್ದಾರೆ. ಮುಂಬೈನ ಪ್ರಮುಖ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಪಾಸ್​ ಆಗ್ತಿದ್ದ ಸಿಎಂ ಶಿಂಧೆ ತಕ್ಷಣವೇ ತಮ್ಮ ಕಾರು ನಿಲ್ಲಿಸಿ, ಸಹಾಯಕ್ಕೆ ಮುಂದಾಗಿದ್ದಾರೆ. ಜೊತೆಗೆ ಕಾರು ಚಾಲಕನ ಜೊತೆ ಕೆಲ ಹೊತ್ತು ಮಾತನಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.

ABOUT THE AUTHOR

...view details