ಕರ್ನಾಟಕ

karnataka

By

Published : May 18, 2020, 12:02 PM IST

ETV Bharat / videos

ಕೊಪ್ಪಳದ ಜಿಲ್ಲಾಸ್ಪತ್ರೆ ಐಸೋಲೇಷನ್​​ ವಾರ್ಡ್​​​​​​​ನಿಂದ ವ್ಯಕ್ತಿ ಪರಾರಿ!

ಕೊಪ್ಪಳ: ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್​​​​​​​ನಲ್ಲಿ ದಾಖಲಾಗಿದ್ದ ವ್ಯಕ್ತಿ ಡಿಸ್ಚಾರ್ಜ್​ ಮಾಡುವ ಮುನ್ನವೇ ಎಸ್ಕೇಪ್ ಆಗಿದ್ದಾನೆ. ಮಹಾರಾಷ್ಟ್ರ ಮೂಲದ 42 ವರ್ಷದ ವ್ಯಕ್ತಿಯನ್ನು ಕೊರೊನಾ ಸೋಂಕು ತಗುಲಿರುವ ಶಂಕೆಯಿಂದ ಆಸ್ಪತ್ರೆಗೆ ದಾಖಲಿಸಿ, ಮೇ 11ರಂದು ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್​​ಗೆ ಕಳಿಸಲಾಗಿತ್ತು. ಲ್ಯಾಬ್ ವರದಿ ನೆಗೆಟಿವ್ ಬಂದಿದೆ. ಆದರೆ ಡಿಸ್ಚಾರ್ಜ್​ ಮಾಡುವ ಮುನ್ನವೇ ನಿನ್ನೆ ಸಂಜೆ ಆ ವ್ಯಕ್ತಿ ಪರಾರಿಯಾಗಿದ್ದಾನೆ. ಈ ಕುರಿತು ಜಿಲ್ಲಾಸ್ಪತ್ರೆಯ ಪ್ರಕಾಶ್ ಎಂಬುವವರು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

For All Latest Updates

ABOUT THE AUTHOR

...view details