ಕರ್ನಾಟಕ

karnataka

By

Published : Jul 28, 2022, 3:45 PM IST

ETV Bharat / videos

ರೈಲಿನಲ್ಲಿ ಹಾವು ಪತ್ತೆ.. ಬೆಚ್ಚಿಬಿದ್ದ ಪ್ರಯಾಣಿಕರು

ರೈಲಿನ ಒಂದು ಕಂಪಾರ್ಟ್‌ಮೆಂಟ್‌ನಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಪ್ರಯಾಣಿಕರು ಗಾಬರಿಯಿಂದ ಹುಡುಕಾಟ ನಡೆಸಿದ್ದಕ್ಕಾಗಿ ತಿರುವನಂತಪುರಂ-ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಅನ್ನು ಕೇರಳದ ಕೋಝಿಕೋಡ್‌ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಿಲ್ಲಿಸಲಾಯಿತು. ಆದರೆ ಸರಿಸೃಪ ಪತ್ತೆಯಾಗಿಲ್ಲ. ರೈಲು ಸಮೀಪದ ತಿರೂರ್ ನಿಲ್ದಾಣದಿಂದ ಬುಧವಾರ ರಾತ್ರಿ S5 ಕಂಪಾರ್ಟ್‌ಮೆಂಟ್‌ನಲ್ಲಿ ಲಗೇಜ್‌ಗಳ ನಡುವೆ ಹಾವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಪ್ರಯಾಣಿಕರು TTE ಗೆ ಮಾಹಿತಿ ನೀಡಿದ್ದಾರೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ನಂತರ ಹಾವನ್ನು ಪತ್ತೆಹಚ್ಚಲು ಅರಣ್ಯ ಇಲಾಖೆಯ ತಜ್ಞರು ಸ್ಥಳಕ್ಕೆ ಬಂದರೂ ಅದನ್ನು ಪತ್ತೆಮಾಡಲಾಗಿಲ್ಲ ಎಂದು ತಿಳಿದುಬಂದಿದೆ.

ABOUT THE AUTHOR

...view details