ಮೈಸೂರು: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತು ನೈಜತೆಯನ್ನು ಜನರಿಗೆ ತಿಳಿಸುವ ಸಲುವಾಗಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಸಮಿತಿಯ ಸಂಚಾಲಕ ರಜತ್ ಅವರು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ಇಂದು ಮೈಸೂರು ನಗರದ ಅರಮನೆ ಮುಂಭಾಗದಲ್ಲಿ ಸಾವರ್ಕರ್ ರಥಯಾತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಿ, 8 ದಿನಗಳ ಈ ರಥಯಾತ್ರೆಗೆ ಚಾಲನೆ ನೀಡಿದ್ದರು. ಈ ರಥಯಾತ್ರೆಯ ಸಂಚಾಲಕರಾದ ರಜತ್ ಈಟಿವಿ ಭಾರತ್ನೊಂದಿಗೆ ಮಾತನಾಡಿ, ರಥಯಾತ್ರೆಯ ಉದ್ದೇಶ, ಎಲ್ಲೆಲ್ಲಿ ಸಂಚರಿಸುತ್ತದೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.