ನವದೆಹಲಿ:ಮುಂದಿನ ವರ್ಷ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಜಗ್ಪುರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಇತ್ತೀಚಿಗಷ್ಟೇ ಎಎಪಿ ಸೇರಿದ್ದ ಶಿಕ್ಷಣ ತಜ್ಞ ಅವದ್ ಓಜಾ ಅವರು ಪತ್ಪರಗಂಜ್ನಿಂದ ಕಣಕ್ಕಿಳಿಯುತ್ತಿದ್ದಾರೆ. ಪ್ರಸ್ತುತ ಈ ಕ್ಷೇತ್ರವನ್ನು ಸಿಸೋಡಿಯಾ ಪ್ರತಿನಿಧಿಸುತ್ತಿದ್ದಾರೆ.
ಬಿಜೆಪಿ ತೊರೆದು ಎಎಪಿ ಸೇರಿದ್ದ ಜಿತೇಂದರ್ ಸಿಂಗ್ ಅವರು ಶಹಾದರ್ ಮತ್ತು ಸುರಿಂದರ್ ಪಾಲ್ ಸಿಂಗ್ ಬಿಟ್ಟು ತಿಮರ್ಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.