ಕರ್ನಾಟಕ

karnataka

ETV Bharat / bharat

ನಿಂತಿದ್ದ ಕಂಟೇನರ್​ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರು ದುರ್ಮರಣ - Andhra Pradesh Accident

ಆಂಧ್ರ ಪ್ರದೇಶದ ಏಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದ್ವಾರಕಾತಿರುಮಲ ತಾಲೂಕಿನ ಲಕ್ಷ್ಮೀನಗರದಲ್ಲಿ ನಿಂತಿದ್ದ ಕಂಟೈನರ್‌ಗೆ ಕಾರೊಂದು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

By ETV Bharat Karnataka Team

Published : Jul 8, 2024, 9:41 AM IST

CAR COLLIDED WITH A CONTAINER  ROAD ACCIDENT IN ELURU  PEOPLE DIED IN ROAD ACCIDENT  TELUGU NEWS
ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ (ETV Bharat)

ಏಲೂರು(ಆಂಧ್ರ ಪ್ರದೇಶ):ಇಲ್ಲಿನ ದ್ವಾರಕಾತಿರುಮಲ ತಾಲೂಕಿನ ಲಕ್ಷ್ಮೀನಗರದಲ್ಲಿ ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟರು.

ಅಪಘಾತಕ್ಕೆ ಕಾರಣವಾದ ಕಾರು ನಲ್ಲಜರ್ಲದಿಂದ ರಾಜಮಹೇಂದ್ರವರಂ ಕಡೆಗೆ ಸಂಚರಿಸುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ:ಮುಂಗಾರಿನ ಮೊದಲ ಮಳೆಗೆ ಚಾರ್ಮಾಡಿ ಹೆದ್ದಾರಿಯಲ್ಲಿ ಗುಡ್ಡ ಕುಸಿತ - Charmadi Hill Collapse

ABOUT THE AUTHOR

...view details