ಕರ್ನಾಟಕ

karnataka

ETV Bharat / bharat

ಬಿಷ್ಣೋಯ್​ ಹಿಟ್​ಲಿಸ್ಟ್​ನಲ್ಲಿ ಬಾಬಾ ಸಿದ್ದಿಕಿ ಪುತ್ರ: ಯಾರೇ ಸಿಕ್ಕರೂ ಹತ್ಯೆ ಮಾಡಲು ಬಂದಿತ್ತು ಆದೇಶ!

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ವಿಷಯಗಳು ಹೊರಬರುತ್ತಿವೆ. ಬಾಬಾ ಜೊತೆಗೆ ಆತನ ಪುತ್ರನ ಕೊಲೆಗೂ ಸಂಚು ರೂಪಿಸಲಾಗಿತ್ತು ಎಂದು ಗೊತ್ತಾಗಿದೆ.

By ETV Bharat Karnataka Team

Published : 4 hours ago

ಬಿಷ್ಣೋಯ್​ ಹಿಟ್​ಲಿಸ್ಟ್​ನಲ್ಲಿ ಬಾಬಾ ಸಿದ್ದಿಕಿ ಪುತ್ರ
ಬಿಷ್ಣೋಯ್​ ಹಿಟ್​ಲಿಸ್ಟ್​ನಲ್ಲಿ ಬಾಬಾ ಸಿದ್ದಿಕಿ ಪುತ್ರ (ETV Bharat)

ಮುಂಬೈ (ಮಹಾರಾಷ್ಟ್ರ):ಮಾಜಿ ಸಚಿವ ಮತ್ತು ಅಜಿತ್ ಪವಾರ್ ಬಣದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ಅಂಶಗಳು ಬಹಿರಂಗವಾಗಿವೆ. ಹತ್ಯೆ ಆರೋಪ ಹೊತ್ತಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಹಿಟ್ ಲಿಸ್ಟ್‌ನಲ್ಲಿ ಬಾಬಾ ಸಿದ್ದಿಕಿ ಅವರ ಮಗ ಮತ್ತು ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕಿ ಕೂಡ ಇದ್ದ ಎಂಬುದು ಗೊತ್ತಾಗಿದೆ.

ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಜೊತೆಗೆ ಜೀಶನ್ ಸಿದ್ದಿಕಿಯನ್ನು ಕೊಲ್ಲಲು ನಿರ್ಧರಿಸಿತ್ತು. ಸಿದ್ಧಿಕಿ ಹತ್ಯೆ ದಿನದಂದು ಇಬ್ಬರನ್ನು ಅಥವಾ ಯಾರು ಸಿಗುತ್ತಾರೋ ಅವರನ್ನು ಕೊಲ್ಲುವಂತೆ ಆರೋಪಿಗಳಿಗೆ ಗ್ಯಾಂಗ್ ಸೂಚಿಸಿತ್ತು ಎಂದು ತಿಳಿದು ಬಂದಿದೆ.

ಜೀಶನ್ ಸಿದ್ದಿಕಿ ಕಾಂಗ್ರೆಸ್ ಶಾಸಕನಾಗಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಪಕ್ಷ ಆತನನ್ನು ಉಚ್ಚಾಟಿಸಿದೆ. ಬಾಂದ್ರಾದಲ್ಲಿರುವ ಶಾಸಕರ ಕಚೇರಿಯಿಂದ ಬಾಬಾ ಸಿದ್ದಿಕಿ ಮತ್ತು ಜೀಶನ್ ಸಿದ್ದಿಕಿ ಹೊರಗೆ ಬಂದಾಗ ಆರೋಪಿಗಳು ಸಿದ್ದಿಕಿಗೆ ಕಾವಲು ಕಾಯುತ್ತಿದ್ದ ಕಾನ್ಸ್ಟೇಬಲ್ ಕಣ್ಣಿಗೆ ಕಾರದಪುಡಿ ಎರಚಿದ್ದಾರೆ. ಜೊತೆಗೆ ಪೆಪ್ಪರ್ ಸ್ಪ್ರೇ ಕೂಡ ತೆಗೆದುಕೊಂಡು ಹೋಗಿದ್ದಾರೆ. ದಸರಾ ಸಂಭ್ರಮದ ಮಾದರಿಯಲ್ಲಿ ಪಟಾಕಿ ಸಿಡಿಸಿ, ಅದರ ಜೊತೆಗೆ ಗುಂಡು ಹಾರಿಸುವ ಯೋಜನೆ ಹೊಂದಲಾಗಿತ್ತು. ಆದರೆ, ಭದ್ರತಾ ಸಿಬ್ಬಂದಿಯನ್ನು ಕಂಡು ನೇರವಾಗಿ ಶಾಸಕನ ಮೇಲೆ ದಾಳಿ ಮಾಡಲಾಗಿದೆ.

ಪೂರ್ವನಿಯೋಜಿತ ಸಂಚು:ಆರೋಪಿ ಶಿವಕುಮಾರ್ ಶಾಸಕನ ಮೇಲೆ ಐದಾರು ಸುತ್ತು ಗುಂಡು ಹಾರಿಸಿ ಜನರಲ್ಲಿ ನುಸುಳಿ ಪರಾರಿಯಾಗಿದ್ದಾನೆ. ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಮಾತ್ರ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಓಡುತ್ತಿರುವುದು ಕಂಡ ಫೋನ್ ಕಳ್ಳರು ಎಂದು ಜನರು ಭಾವಿಸಿದ್ದರು. ಶಾಸಕನ ಕೊಲೆಗೆ ಮೊದಲೇ ಪೂರ್ವನಿಯೋಜಿತ ಸಂಚು ರೂಪಿಸಲಾಗಿತ್ತು. 25 ಲಕ್ಷ ಸುಪಾರಿಯಲ್ಲಿ ಮೂವರು ಆರೋಪಿಗಳಿಗೆ 50 ಸಾವಿರ ರೂಪಾಯಿ ಮುಂಗಡ ನೀಡಲಾಗಿದೆ.

ಅಲ್ಲದೇ, ಈ ಪ್ರಕರಣದಲ್ಲಿ ಪಂಜಾಬ್ ಮೂಲದ ಜೀಶನ್ ಅಖ್ತರ್ ಎಂಬ ನಾಲ್ಕನೇ ವ್ಯಕ್ತಿಯ ಕೈವಾಡವಿದೆ. ಕೊಲೆ, ಕಳ್ಳತನ ಪ್ರಕರಣಗಳಲ್ಲಿ ಎರಡು ವರ್ಷಗಳ ಕಾಲ ಜೈಲಿನಲ್ಲಿದ್ದ ಈತ ಇತ್ತೀಚೆಗೆ ಬಿಡುಗಡೆಯಾಗಿದ್ದ. ಸಿದ್ದಿಕಿ ಹತ್ಯೆಗೆ 15 ದಿನಗಳ ಮೊದಲು ಈತನ ಕುಟುಂಬ ಜಲಂಧರ್​​ನಿಂದ ನಾಪತ್ತೆಯಾಗಿದೆ.

ಆರೋಪಿ ಕಶ್ಯಪ್​ ಅಪ್ರಾಪ್ತನಲ್ಲ:ಸಿದ್ದಿಕಿ ಹತ್ಯೆ ಪ್ರಕರಣದ ಧರ್ಮರಾಜ್ ಕಶ್ಯಪ್ ಎಂಬ ಆರೋಪಿ ಅಪ್ರಾಪ್ತ ಎಂದು ಹೇಳಲಾಗಿತ್ತು. ಆದರೆ, ಆತ ಅಪ್ರಾಪ್ತನಲ್ಲ ಎಂಬುದು ಬಯಲಾಗಿದೆ. ನ್ಯಾಯಾಲಯದ ಮುಂದೆ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಈತನ ಬಳಿ ಜನನಪ್ರಮಾಣ ಪತ್ರ ಇರಲಿಲ್ಲ. ಹೀಗಾಗಿ, ನಿಜವೋ, ಸುಳ್ಳೋ? ಎಂಬುದನ್ನು ಪತ್ತೆ ಹಚ್ಚಲು ಬೋನ್​ ಅಸಿಫಿಕೇಶನ್​ ಪರೀಕ್ಷೆ ನಡೆಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿತ್ತು. ಆ ಪರೀಕ್ಷೆಯಲ್ಲಿ ಆತ ಅಪ್ರಾಪ್ತನಲ್ಲ ಎಂಬುದು ಗೊತ್ತಾಗಿದೆ.

ಇನ್ನೂ, ಹರ್ಯಾಣದ ಕರ್ನೈಲ್ ಸಿಂಗ್, ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಮತ್ತು ಉತ್ತರ ಪ್ರದೇಶದ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಮಾಜಿ ಸಚಿವರ ಹತ್ಯೆಯು ರಾಜ್ಯದಲ್ಲಿ ಸಂಚಲನ ಉಂಟು ಮಾಡಿದೆ. ಮಹಾಯುತಿ ಸರ್ಕಾರ ಟೀಕೆಗೆ ಗುರಿಯಾಗಿದ್ದು, ಆರೋಪಿಗಳಿಗೆ ಮರಣದಂಡನೆ ವಿಧಿಸಲು ಕಾನೂನು ತಜ್ಞರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:'ಬಾಬಾ ಸಿದ್ದಿಕಿ ಕೊಂದಿದ್ದು ನಾವೇ': ಹತ್ಯೆ ಹೊಣೆ ಹೊತ್ತ ಲಾರೆನ್ಸ್​​ ಬಿಷ್ಣೋಯಿ ಗ್ಯಾಂಗ್​

ABOUT THE AUTHOR

...view details