ಕರ್ನಾಟಕ

karnataka

ETV Bharat / bharat

'ಹುಸಿ' ಪೀಡಕರಿಗೆ ಕಠಿಣ ಶಿಕ್ಷೆಗಾಗಿ ವಿಮಾನಯಾನ ಕಾನೂನುಗಳಿಗೆ ತಿದ್ದುಪಡಿ: ಕೇಂದ್ರ ಸರ್ಕಾರ

ವಿಮಾನಗಳಿಗೆ ಹುಸಿ ಬಾಂಬ್​​ ಕರೆಗಳು ಮುಂದುವರಿದಿವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕಠಿಣ ನಿಯಮಗಳನ್ನು ರೂಪಿಸಲು ಮುಂದಾಗಿದೆ.

ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು
ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು (ETV Bharat)

By PTI

Published : 5 hours ago

ವಿಶಾಖಪಟ್ಟಣಂ (ಆಂಧ್ರಪ್ರದೇಶ):ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ ಬರುತ್ತಿರುವ ಸತತ ಬೆದರಿಕೆ ಕರೆಗಳಿಂದಾಗಿ ಪ್ರಯಾಣಿಕರಲ್ಲಿ ಆತಂಕ ಉಂಟಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸಲು ವಿಮಾನಯಾನ ಕಾನೂನುಗಳಿಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಹೇಳಿದ್ದಾರೆ.

ಭಾನುವಾರ ವಿಶಾಖಪಟ್ಟಣಂ ಮತ್ತು ವಿಜಯವಾಡದ ನಡುವೆ ಎರಡು ವಿಮಾನಗಳ ಹಾರಾಟಕ್ಕೆ ಔಪಚಾರಿಕ ಚಾಲನೆ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಹುಸಿ ಬಾಂಬ್​ ಬೆದರಿಕೆಗಳನ್ನು ತಡೆಯಲು ಅಂತಾರಾಷ್ಟ್ರೀಯ ಸಂಸ್ಥೆಗಳು, ಕಾನೂನು ಜಾರಿ ಏಜೆನ್ಸಿಗಳು ಮತ್ತು ಗುಪ್ತಚರ ಬ್ಯೂರೋದ ನೆರವು ಪಡೆಯುವುದರ ಜೊತೆಗೆ, ಕೇಂದ್ರ ಸರ್ಕಾರವೂ ಎರಡು ನಾಗರಿಕ ವಿಮಾನಯಾನ ಕಾನೂನುಗಳಿಗೆ ತಿದ್ದುಪಡಿ ಮಾಡಲು ಚಿಂತನೆ ನಡೆಸಿದೆ ಎಂದರು.

ವಿಮಾನಗಳಿಗೆ ಬಾಂಬ್​ ಬೆದರಿಕೆ ಹಾಕುವ ದುಷ್ಕರ್ಮಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೃತ್ಯದಲ್ಲಿ ಸಿಕ್ಕಿಬಿದ್ದವರು ಜೀವನಪೂರ್ತಿ ವಿಮಾನ ಸಂಚಾರದಿಂದಲೇ ನಿರ್ಬಂಧಕ್ಕೆ ಒಳಪಡಿಸಲಾಗುವುದು. ಹುಸಿ ಬಾಂಬ್​ ಕರೆಗಳನ್ನು ತಡೆಯಲು ಕಠಿಣ ಕಾನೂನು ತರಲಾಗುವುದು ಎಂದು ತಿಳಿಸಿದರು.

ಆರೋಪಿಗಳಿಗೆ ಆಜೀವ ವಿಮಾನ ಸಂಚಾರ ನಿಷೇಧದ ಜೊತೆಗೆ, ಕಠಿಣ ಶಿಕ್ಷೆ ಮತ್ತು ದಂಡವನ್ನೂ ವಿಧಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಕಠಿಣ ನಿಯಮಗಳನ್ನು ರೂಪಿಸಿ ಘೋಷಿಸುತ್ತೇವೆ ಎಂದು ಕೇಂದ್ರ ಸಚಿವರು ಹೇಳಿದರು.

ಕಳೆದ 13 ದಿನಗಳಲ್ಲಿ, ಭಾರತೀಯ ಏರ್​ಲೈನ್ಸ್​​ಗಳ 300ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಕರೆಗಳು ಬಂದಿವೆ. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಒಡ್ಡಲಾಗಿದೆ. ನಕಲಿ ಬೆದರಿಕೆಗಳ ತನಿಖೆ ಗಂಭೀರವಾಗಿ ನಡೆಯುತ್ತಿದೆ. ಸಾಮಾಜಿಕ ಮಾಧ್ಯಮ ವೇದಿಕೆಯಾದ 'ಎಕ್ಸ್'ನ ಸಹಕಾರವನ್ನೂ ಪಡೆಯಲಾಗುತ್ತಿದೆ ಎಂದರು.

ಇದನ್ನೂ ಓದಿ:26/11ರ ಮುಂಬೈ ದಾಳಿಗೆ ಅಂದಿನ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿಲ್ಲ: ಜೈಶಂಕರ್​

ABOUT THE AUTHOR

...view details