ಪೂರ್ಣಿಯಾ(ಬಿಹಾರ): ಬಿಹಾರದ ಪೂರ್ಣಿಯಾ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಮೈತ್ರಿ ಭಾಗವಾಗಿ ಈ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಜೆಡಿಯುಗೆ ಬಿಟ್ಟುಕೊಟ್ಟಿದೆ. ಇದರಿಂದ ಅತೃಪ್ತಿಗೊಂಡ ಪಪ್ಪು ಯಾದವ್ ಕಣಕ್ಕಿಳಿದಿದ್ದಾರೆ.
ಪಪ್ಪು ಯಾದವ್ ತಮ್ಮ ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಗೆ ಮೋಟಾರ್ ಸೈಕಲ್ನಲ್ಲಿ ಮೆರವಣಿಗೆ ತೆರಳಿದರು. ಈ ವೇಳೆ, ಕಾಂಗ್ರೆಸ್ ಯಾವುದೇ ನಾಯಕರು ಜತೆಗಿರಲಿಲ್ಲ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಕೊನೆಯುಸಿರಿರುವವರೆಗೂ ಪಕ್ಷದ ಜತೆ ಇರುತ್ತೇನೆ ಎಂದು ಹೇಳಿದರು. ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯಾದವ್, ನನಗೆ ಕಾಂಗ್ರೆಸ್ ಬೆಂಬಲವಿದೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ನನ್ನ ರಾಜಕೀಯ ಬದುಕನ್ನು ಕೊನೆಗಾಣಿಸಲು ಹಲವರು ಸಂಚು ಮಾಡಿದ್ದಾರೆ ಎಂದು ಆರೋಪಿಸಿದರು.
ಮುಂದುವರೆದು, ಈ ಪಪ್ಪು ಯಾದವ್ ಅವರನ್ನು ಪೂರ್ಣಿಯಾ ಜನರು ಯಾವಾಗಲೂ ಜಾತಿ ಮತ್ತು ಧರ್ಮವನ್ನು ಮೀರಿ ಬೆಂಬಲಿಸಿದ್ದಾರೆ. ನಾನು ಇಂಡಿಯಾ ಮೈತ್ರಿಯನ್ನು ಬಲಪಡಿಸುತ್ತೇನೆ. ಜತೆಗೆ ರಾಹುಲ್ ಗಾಂಧಿ ಅವರನ್ನು ಬಲಪಡಿಸುವ ಸಂಕಲ್ಪವನ್ನೂ ನಾನು ಮಾಡುತ್ತೇನೆ. ಪೂರ್ಣಿಯಾ ಜನರು ನಾನು ಸ್ಪರ್ಧಿಸಬೇಕೆಂದು ಬಯಸಿದ್ದರಿಂದ ನಾನು ನಾಮಪತ್ರ ಸಲ್ಲಿಸಿದ್ದೇನೆ. ನಾನು ಪೂರ್ಣಿಯಾ, ಸೀಮಾಂಚಲ್ ಮತ್ತು ಬಿಹಾರದ ಜನರ ಕಲ್ಯಾಣಕ್ಕಾಗಿ ಹೋರಾಡುತ್ತೇನೆ ಎಂದು ಹೇಳಿದರು.