ಕರ್ನಾಟಕ

karnataka

By ETV Bharat Karnataka Team

Published : Apr 20, 2024, 1:55 PM IST

ETV Bharat / bharat

ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಗ್ಯಾಂಗ್​ರೇಪ್​: ಆರೋಪಿಗಳಲ್ಲಿ ಇಬ್ಬರು ಅಪ್ತಾಪ್ತರು! - gang rape

ಜಾರ್ಖಂಡ್​ ರಾಜಧಾನಿ ರಾಂಚಿಯಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಗ್ಯಾಂಗ್​ರೇಪ್
ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಗ್ಯಾಂಗ್​ರೇಪ್

ರಾಂಚಿ (ಜಾರ್ಖಂಡ್​):ರಾಂಚಿಯಲ್ಲಿ ಸಂಚಲನಾತ್ಮಕ ಗ್ಯಾಂಗ್​ರೇಪ್​ ಕೇಸ್​ ಬೆಳಕಿಗೆ ಬಂದಿದೆ. ಇಬ್ಬರು ಸಹೋದರಿಯರ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಅಪ್ತಾಪ್ತರು ಎಂಬುದು ವಿಚಿತ್ರ ಸಂಗತಿ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಜಿಲ್ಲೆಯ ಮಂದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಕರಣದ ವಿವರ:ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಅಪ್ರಾಪ್ತ ಮಕ್ಕಳಿಬ್ಬರು ಗುರುವಾರ (ಏಪ್ರಿಲ್​ 18) ಚಾನ್ಹೋದಲ್ಲಿ ನಡೆದ ಜಾತ್ರೆಗೆ ಹೋಗಿದ್ದರು. ವಾಪಸ್​ ಬರುವಾಗ ಮಕ್ಕಳ ಜೊತೆಯಲ್ಲಿ ಪರಿಚಯಸ್ಥ ಆರೋಪಿಗಳೂ ಬಂದಿದ್ದಾರೆ. ದಾರಿ ಮಧ್ಯೆ ನಮ್ಮ ಮಕ್ಕಳನ್ನು ಹೆದರಿಸಿ ಅರಣ್ಯ ಪ್ರದೇಶದಲ್ಲಿನ ಪಾಳು ಮನೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಸ್ವಲ್ಪ ಸಮಯದ ನಂತರ, ಆರೋಪಿಗಳಲ್ಲಿ ಒಬ್ಬ ತನ್ನ ಇನ್ನೊಬ್ಬ ಗೆಳೆಯನನ್ನು ದೂರವಾಣಿ​ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾನೆ. ಆತ ಸ್ಥಳಕ್ಕೆ ಬಂದ ಮೇಲೆ ಮತ್ತೆ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುಟುಂಬಸ್ಥರಿಂದ ಹುಡುಕಾಟ:ಗುರುವಾರ ತಡರಾತ್ರಿಯವರೆಗೂ ಅಪ್ರಾಪ್ತೆಯರು ಮನೆಗೆ ಬಾರದೆ ಇದ್ದಾಗ, ಕುಟುಂಬಸ್ಥರು ಆತಂಕಕ್ಕೀಡಾಗಿದ್ದಾರೆ. ಹೆಣ್ಣುಮಕ್ಕಳಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಸಾಕಷ್ಟು ಹುಡುಕಾಟದ ಬಳಿಕವೂ ಕುಟುಂಬಸ್ಥರಿಗೆ ಅವರು ಎಲ್ಲಿದ್ದಾರೆ ಎಂಬುದು ಪತ್ತೆಯಾಗಿರಲಿಲ್ಲ. ಇದೇ ವೇಳೆ, ಮಧ್ಯರಾತ್ರಿ ಅಪ್ರಾಪ್ತೆಯರಲ್ಲಿ ಒಬ್ಬಳು ಅತ್ಯಾಚಾರಿಗಳಿಂದ ಅದು ಹೇಗೋ ತಪ್ಪಿಸಿಕೊಂಡಿದ್ದಾಳೆ. ಮನೆಗೆ ಬಂದ ಬಾಲಕಿ ನಡೆದ ಘಟನೆಯ ಬಗ್ಗೆ ಕುಟುಂಬದ ಸದಸ್ಯರಿಗೆ ಸವಿವರವಾಗಿ ಹೇಳಿದ್ದಾರೆ.

ಇನ್ನೊಬ್ಬ ಬಾಲಕಿ ನಾಪತ್ತೆ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಖಾಕಿ ಪಡೆ, ಖಳರಿ - ಬಿಜುಪಾದ ರಸ್ತೆಯ ಬಳಿಯ ಅರಣ್ಯ ಪ್ರದೇಶದ ಮನೆಯೊಂದರಲ್ಲಿ ಸಂತ್ರಸ್ತೆಯನ್ನು ಪತ್ತೆ ಮಾಡಿದ್ದಾರೆ.

ಆರೋಪಿಗಳ ಇಬ್ಬರು ಅಪ್ರಾಪ್ತರು!:ಮಂದಾರ ವೃತ್ತ ನಿರೀಕ್ಷಕ ಜೈ ಪ್ರಕಾಶ್ ರಾಣಾ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದು, ಇಬ್ಬರು ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ದುರಂತ ಎಂದರೆ ಇವರಲ್ಲಿ ಇಬ್ಬರು ಆರೋಪಿಗಳು ಅಪ್ರಾಪ್ತರಾಗಿದ್ದು, ಓರ್ವ ವಯಸ್ಕ ಆರೋಪಿಯನ್ನು ಜೈಲಿಗೆ ಕಳುಹಿಸಲಾಗಿದೆ. ಇನ್ನಿಬ್ಬರನ್ನು ಕಸ್ಟಡಿಗೆ ಪಡೆಯಲಾಗಿದೆ. ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ನನ್ನ ಪುತ್ರಿಯನ್ನು ಕೊಲೆ ಮಾಡಿದ ಆರೋಪಿಯನ್ನು ಗಲ್ಲಿಗೇರಿಸಿ: ನಿರಂಜನಯ್ಯ ಹಿರೇಮಠ - Neha Hiremath Murder Case

ABOUT THE AUTHOR

...view details