ನವದೆಹಲಿ:ಕಾಶ್ಮೀರಿ ಮಾನವ ಹಕ್ಕುಗಳ ಕಾರ್ಯಕರ್ತೆ ಮತ್ತು ಪತ್ರಕರ್ತೆ ಯಾನಾ ಮಿರ್ ಅವರ ಆರೋಪಕ್ಕೆ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ವಿವರಣೆ ನೀಡಿದೆ. ಯಾನಾ ಮಿರ್ ಅವರು ತಪಾಸಣೆಗೆ ಸಹಕರಿಸಲಿಲ್ಲ ಎಂದು ಕಸ್ಟಮ್ಸ್ ಅಧಿಕಾರಿಗಳು ವಿಡಿಯೋ ಸಮೇತ ಹೇಳಿದ್ದಾರೆ.
ಬ್ರಿಟನ್ನಲ್ಲಿ ಮಲಾಲಾ ಯೂಸುಫ್ ಜಾಯ್ ಕುರಿತು ಕಾಮೆಂಟ್ ಮಾಡುವ ಮೂಲಕ ಗಮನ ಸೆಳೆದಿದ್ದ ಕಾಶ್ಮೀರಿ ಮಾನವ ಹಕ್ಕುಗಳ ಕಾರ್ಯಕರ್ತೆ ಮತ್ತು ಪತ್ರಕರ್ತೆ ಯಾನಾ ಮಿರ್ಗೆ ಕಹಿ ಅನುಭವವಾಗಿದೆ. ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಸಿಬ್ಬಂದಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಯಾನಾ ಮಿರ್ ಮಾಡಿರುವ ಆರೋಪಕ್ಕೆ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಪ್ರತಿಕ್ರಿಯಿಸಿದೆ. ಭದ್ರತಾ ತಪಾಸಣೆಗೆ ಯಾನಾ ಅವರು ಸಹಕರಿಸಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳನ್ನೂ ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಲಂಡನ್ನ ಸಂಕಲ್ಪ್ ದಿವಸ್ನಲ್ಲಿ ಯಾನಾ ಮೀರ್ ಡೈವರ್ಸಿಟಿ ಅಂಬಾಸಿಡರ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಆ ಸಂದರ್ಭದಲ್ಲಿ ಅವರು ಕಾಶ್ಮೀರದ ಭದ್ರತೆ ಕುರಿತು ಬ್ರಿಟಿಷ್ ಸಂಸತ್ತಿನಲ್ಲಿ ಭಾಷಣ ಮಾಡಿ ಭಾರತೀಯರ ಮನ ಮುಟ್ಟಿದ್ದರು. ಇತ್ತೀಚೆಗಷ್ಟೇ ಅವರು ಭಾರತಕ್ಕೆ ಮರಳಿದ್ದರು. ಈ ವೇಳೆ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್ ಸಿಬ್ಬಂದಿ ಅನುಚಿತವಾಗಿ ವರ್ತಿಸಿದರು ಮತ್ತು ಸ್ಮಗ್ಲರ್ನಂತೆ ನೋಡಿದರು ಎಂದು Xನಲ್ಲಿ ಬರೆದುಕೊಂಡಿದ್ದರು.