ಮಂಡಿ (ಹಿಮಾಚಲ ಪ್ರದೇಶ):ಸಂಜೌಲಿ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಪ್ರಾರ್ಥನಾ ಮಂದಿರದ ಕೆಲವು ಮಹಡಿಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಮಂಡಿಯಲ್ಲಿಂದು ಬೃಹತ್ ಪ್ರತಿಭಟನೆಗೆ ಕೆಲವು ಸಂಘಟನೆಗಳು ಮುಂದಾಗಿದ್ದವು. ಆದರೆ ಅದಕ್ಕೆ ಮುಂಚೆಯೇ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಪೂರ್ವ್ ದೇವಗನ್ ಏಳು ವಾರ್ಡ್ಗಳಲ್ಲಿ ಭಾರತೀಯ ನಾಗರಿಕ ರಕ್ಷಣಾ ಸಂಹಿತೆಯ ಸೆಕ್ಷನ್ 163 (ನಿಷೇಧಾಜ್ಞೆ) ಜಾರಿಗೊಳಿಸಿದ್ದಾರೆ.
ಸೆಕ್ಷನ್ 163 ಅಡಿ ಐದಕ್ಕಿಂತ ಹೆಚ್ಚು ಮಂದಿ ಒಟ್ಟುಗೂಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಜೊತೆಗೆ ಶಸಾಸ್ತ್ರಗಳು ಹಾಗೂ ದಹನಶೀಲ ವಸ್ತುಗಳನ್ನು ಸಾಗಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ವಾರ್ಡ್ ನಂ 5 ಮಂಗ್ವಾಲ್, ವಾರ್ಡ್ ನಂ 13 ಥಾನೆಹ್ರಾ, ವಾರ್ಡ್ ನಂ 12 ಭಗ್ವಹನ್ ಮೊಹಲ್ಲಾ, ವಾರ್ಡ್ 8 ಪ್ಯಾಲೇಸ್-1, ವಾರ್ಡ್ 9 ಫೇಸ್ 2, ವಾರ್ಡ್ 10 ಸುಹ್ರಾ ಮೊಹಲ್ಲಾ, ವಾರ್ಡ್ 11 ಮಂಡಿ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದ ಸಂಖೇಟರ್ನಲ್ಲಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.
ಈ ಕುರಿತು ಮಾತನಾಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ಉದ್ದೇಶದಿಂದ ಜಿಲ್ಲಾಡಳಿಕ ಈ ಕ್ರಮಕ್ಕೆ ಮುಂದಾಗಿದೆ. ಯಾವುದೇ ರೀತಿಯ ಪ್ರತಿಭಟನೆಗೆ ಸಮರ್ಥನೆ ಇಲ್ಲ. ಬಿಎನ್ಎಸ್ ಸೆಕ್ಷನ್ 183 ಅನ್ನು ನಗರದ ಏಳು ವಾರ್ಡ್ನಲ್ಲಿ ಜಾರಿಗೆ ತರಲಾಗಿದೆ. ಯಾರಾದರೂ ಶಾಂತಿ ಕದಡಿದಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಗಳಿಗೆ ಮುಂದಾಗಲಾಗುವುದು ಎಂದು ಎಚ್ಚರಿಸಿದರು.