ಕರ್ನಾಟಕ

karnataka

ETV Bharat / bharat

ಕೃಷಿ ತ್ಯಾಜ್ಯ ಸುಡುವಿಕೆಯಿಂದ ಉತ್ತರ ಭಾರತದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ: ದೆಹಲಿ ಸಿಎಂ ಆತಿಶಿ - DELHI FACING MEDICAL EMERGENCY

ಬಿಜೆಪಿ ನೇತೃತ್ವದ ಸರ್ಕಾರವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ಸುಡುವಿಕೆ ತಡೆಗೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ದೆಹಲಿ ಸಿಎಂ ಆತಿಶಿ ಆರೋಪಿಸಿದರು.

north-india-facing-medical-emergency-due-to-stubble-burning-atishi
ದೆಹಲಿ ಸಿಎಂ ಅತಿಶಿ (ANI)

By PTI

Published : Nov 18, 2024, 2:14 PM IST

ನವದೆಹಲಿ: ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ಗಾಳಿ ಕಲುಷಿತಗೊಂಡಿದ್ದು, ಉತ್ತರ ಭಾರತದೆಲ್ಲೆಡೆ ವೈದ್ಯಕೀಯ ತುರ್ತುಸ್ಥಿತಿ ಎದುರಿಸುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮಾಲಿನ್ಯದ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ನೇತೃತ್ವದ ಸರ್ಕಾರವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ಸುಡುವಿಕೆ ತಡೆಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.

ಇದೇ ವೇಳೆ, ಎಎಪಿ ನೇತೃತ್ವದ ಪಂಜಾಬ್​ ಕಾರ್ಯವನ್ನು ಶ್ಲಾಘಿಸುತ್ತಾ, ಕೃಷಿ ತ್ಯಾಜ್ಯ ಸುಡುವ ಯತ್ನ ಗಣನೀಯವಾಗಿ ಕಡಿಮೆಯಾದ ಏಕೈಕ ರಾಜ್ಯ ಪಂಜಾಬ್. ಆದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇವು ಏರಿಕೆಯಾಗಿವೆ ಎಂದರು.

ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆಯಾಗಿದೆ. ಇದರಿಂದಾಗಿ ಉಸಿರಾಡಲು ಸಮಸ್ಯೆಯಾಗುತ್ತಿದೆ. ವೃದ್ಧರು ಮತ್ತು ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಬೆನ್ನಲ್ಲೇ ಸಿಎಂ ಆತಿಶಿ ಪತ್ರಿಕಾಗೋಷ್ಟಿಯಲ್ಲಿ ಈ ವಿಚಾರಗಳ ಕುರಿತು ಮಾತನಾಡಿದ್ದಾರೆ.

ದೆಹಲಿ ವಾಯು ಗುಣಮಟ್ಟ ತೀವ್ರ ಕಳಪೆಯಾಗಿದ್ದು, ವಾಯು ಗುಣಮಟ್ಟ ಸೂಚ್ಯಂಕ 484ರಷ್ಟಿದೆ. ಈ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರದಲ್ಲಿ ಟ್ರಕ್​ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ ಸಾರ್ವಜನಿಕ ಯೋಜನೆಗಳ ನಿರ್ಮಾಣಗಳನ್ನೂ ನಿಲ್ಲಿಸಲಾಗಿದೆ.

ನಗರದಲ್ಲಿ ದಟ್ಟ ಮಂಜಿನಿಂದ ಕೂಡಿದ ಹೊಗೆ ಇದ್ದು, ಅನೇಕ ವಿಮಾನಗಳ ಹಾರಾಟವೂ ರದ್ದಾಗಿದೆ.

ಗ್ರೇಡೆಡ್​​ ರೆಸ್ಪಾನ್ಸ್​ ಆ್ಯಕ್ಷನ್​ ಪ್ಲಾನ್‌ನ ನಾಲ್ಕನೇ ಹಂತವನ್ನು ಜಾರಿಗೆ ತರಲಾಗಿದೆ. ಈಗಾಗಲೇ 1, 2 ಮತ್ತು 3ನೇ ಹಂತ ಚಾಲನೆಯಲ್ಲಿದೆ. ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳನ್ನು​ ಬಂದ್​ ಮಾಡಿದ್ದು, ಆನ್​ಲೈನ್​ ಮೊರೆಹೋಗುವಂತೆ ಸೂಚಿಸಿದೆ. ಅನಿವಾರ್ಯವಲ್ಲದ ವಾಣಿಜ್ಯ ಚಟುವಟಿಕೆಗಳನ್ನು ಮಿತಿಗೊಳಿಸಿದೆ. ಬೆಸ-ಸಮ ವಾಹನ ನಿಯಮ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ:ಕಳಪೆಯಲ್ಲಿ ಕಳಪೆ ದೆಹಲಿ ವಾಯು ಗುಣಮಟ್ಟ: ಶಾಲೆಗಳು ಬಂದ್,​ ವಿದ್ಯಾರ್ಥಿಗಳಿಗೆ ಆನ್​ಲೈನ್​ ಕ್ಲಾಸ್​

ABOUT THE AUTHOR

...view details