ಕರ್ನಾಟಕ

karnataka

ETV Bharat / bharat

ಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರ ಸ್ನಾನ ಮಾಡಲಿರುವ ಪ್ರಧಾನಿ: ಪ್ರಯಾಗ್‌ರಾಜ್​​ನಲ್ಲಿ ಬಿಗಿ ಭದ್ರತೆ - PM MODI PRAYAGRAJ VISIT

ಮಹಾಕುಂಭ ಮೇಳದಲ್ಲಿ ಭಾಗಿಯಾಲು ಪ್ರಧಾನಿ ಇಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಅವರು ಭದ್ರತೆಯ ನಡುವೆ ಸಾಧು - ಸಂತರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.

PM Modi To Visit Prayagraj For Maha Kumbh 'Snan' On Wednesday; Security Tightened
ಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರ ಸ್ನಾನ ಮಾಡಲಿರುವ ಪ್ರಧಾನಿ: ಪ್ರಯಾಗ್‌ರಾಜ್‌ ಬಿಗಿ ಭದ್ರತೆ (ETV Bharat)

By ETV Bharat Karnataka Team

Published : Feb 5, 2025, 9:30 AM IST

ಪ್ರಯಾಗರಾಜ್, ಉತ್ತರಪ್ರದೇಶ: ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಪ್ರಯಾಗರಾಜ್​​ಗೆ ಭೇಟಿ ನೀಡುತ್ತಿದ್ದಾರೆ. ಜನವರಿ 13 ರಂದು ಪ್ರಾರಂಭವಾದ ಕುಂಭಮೇಳ ಭಾರಿ ಸುದ್ದಿ ಮಾಡುತ್ತಿದೆ. ದೇಶ ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರನ್ನು ಆಕರ್ಷಿಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರಿ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಭದ್ರತಾ ಏಜೆನ್ಸಿಗಳು ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ನಗರದಲ್ಲಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಪ್ರಧಾನಿ ಭೇಟಿಯ ರೂಟ್​ ಮ್ಯಾಪ್​ ಹೀಗಿದೆ:ಅಧಿಕಾರಿಗಳು ನೀಡಿದ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಅವರು ಬೆಳಗ್ಗೆ 10:00 ಗಂಟೆಗೆ ಪ್ರಯಾಗರಾಜ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ, ಅಲ್ಲಿಂದ ಅವರು ಹೆಲಿಕಾಪ್ಟರ್ ಮೂಲಕ ನೈನಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮೈದಾನವನ್ನು ತಲುಪಲಿದ್ದಾರೆ. 10:45 AM ಹೊತ್ತಿಗೆ ಅವರು ಅರೇಲ್ ಘಾಟ್ ತಲುಪುವ ನಿರೀಕ್ಷೆಯಿದೆ ಮತ್ತು ನಂತರ ತ್ರಿವೇಣಿ ಸಂಗಮ್​ ಗೆ ದೋಣಿಯಲ್ಲಿ ಸವಾರಿ ಮಾಡುತ್ತಾರೆ. 11:00 AM ಮತ್ತು 11:30 AM ನಡುವೆ ಮೋದಿ ಅವರು ಸುಮಾರು ಅರ್ಧ ಗಂಟೆ ಮೇಳದಲ್ಲಿ ಕಳೆಯಲಿದ್ದಾರೆ.

ಮಧ್ಯಾಹ್ನ ದೆಹಲಿಗೆ ವಾಪಸ್:ಪವಿತ್ರ ಸ್ನಾನ ಮಾಡಿದ ನಂತರ ವಿಶೇಷ ಪೂಜೆ ಸಲ್ಲಿಸುವ ಅವರು ಮಧ್ಯಾಹ್ನ 12:30 ಕ್ಕೆ ನವದೆಹಲಿಗೆ ವಾಪಸ್​ ಆಗಲಿದ್ದಾರೆ. ಅದಕ್ಕೂ ಮುನ್ನ ಅವರು ಸಾಧು- ಸಂತರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಸುಮಾರು ಎರಡೂವರೆ ಗಂಟೆಗಳ ಕಾಲ ಅವರು ಮಹಾಕುಂಭದಲ್ಲಿ ಇರಲಿದ್ದಾರೆ. ಎರಡು ತಿಂಗಳಲ್ಲಿ ಪ್ರಯಾಗ್‌ರಾಜ್‌ಗೆ ಮೋದಿಯವರ ಎರಡನೇ ಭೇಟಿ ಇದಾಗಿದೆ. ಅವರು ಡಿಸೆಂಬರ್ 13, 2024 ರಂದು ಪ್ರಯಾಗ್​ ರಾಜ್​ ಗೆ ಭೇಟಿ ನೀಡಿದ್ದರು.

ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಿಂದಾಗಿ 30 ಭಕ್ತರು ಪ್ರಾಣಕಳೆದುಕೊಂಡಿದ್ದರೆ, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ತಮ್ಮ ಮಹಾಕುಂಭ ಭೇಟಿಯನ್ನು ರದ್ದುಗೊಳಿಸಬಹುದು ಎಂಬ ಊಹಾಪೋಹಗಳಿದ್ದವು. ಆದರೆ ಮೋದಿ ಇಂದು ಆ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಿದ್ದಾರೆ.

2019 ರ ಕುಂಭಮೇಳದ ಸಮಯದಲ್ಲಿ ಪ್ರಧಾನಿ ಮೋದಿ ಅವರು ನೈರ್ಮಲ್ಯ ಕಾರ್ಮಿಕರ ಸೇವೆಗೆ ಕೃತಜ್ಞತೆಯ ಸಂಕೇತವಾಗಿ ಅವರ ಪಾದಗಳನ್ನು ತೊಳೆಯುವ ಮೂಲಕ ಗೌರವ ಸಮರ್ಪಣೆ ಮಾಡಿದ್ದರು.

ಇದನ್ನು ಓದಿ:25 ಕೋಟಿ ಜನ ಬಡತನದಿಂದ ಹೊರಕ್ಕೆ; SC, ST, OBC ವಿದ್ಯಾರ್ಥಿಗಳಿಗೆ ಮೆಡಿಕಲ್‌ ಸೀಟು ಹೆಚ್ಚಳ: ಲೋಕಸಭೆಯಲ್ಲಿ ಮೋದಿ

ABOUT THE AUTHOR

...view details