ಕರ್ನಾಟಕ

karnataka

ETV Bharat / bharat

ಮುಂಬೈ: ಬಾಂದ್ರಾ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, 9 ಮಂದಿಗೆ ಗಾಯ, ಇಬ್ಬರು ಗಂಭೀರ

ಇದು ಹಬ್ಬದ ಸೀಸನ್. ಈ ಸಂದರ್ಭದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಅದರಲ್ಲೂ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳುವ ಧಾವಂತದಲ್ಲಿದ್ದಾರೆ. ಇದೇ ಧಾವಂತ ಮುಂಬೈ ರೈಲ್ವೇ ನಿಲ್ದಾಣದಲ್ಲಿ ಅನಾಹುತಕ್ಕೆ ಕಾರಣವಾಯಿತು.

ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ, 9 ಮಂದಿಗೆ ಗಾಯ, ಇಬ್ಬರು ಗಂಭೀರ
ಮುಂಬೈ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ (ETV Bharat)

By ETV Bharat Karnataka Team

Published : 5 hours ago

ಮುಂಬೈ:ಇಲ್ಲಿನ ಬಾಂದ್ರಾ ರೈಲು ನಿಲ್ದಾಣದಲ್ಲಿ ಇಂದು ನಸುಕಿನ ಜಾವ ಭಾರಿ ಕಾಲ್ತುಳಿತ ಸಂಭವಿಸಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಬಾಂದ್ರಾ-ಗೋರಖ್‌ಪುರ್ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 22921 ಅನ್ನು ಹತ್ತುವ ಆತುರದಲ್ಲಿ ಹಲವರು ಗಾಯಗೊಂಡರು ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೀಪಾವಳಿ, ಛತ್ ಹಬ್ಬದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜಧಾನಿ ಮುಂಬೈಯಿಂದ ಭಾರತೀಯ ರೈಲ್ವೇ ಹಲವು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಈ ಪೈಕಿ ಬೆಳಗ್ಗಿನ ಜಾವ 5.10ಕ್ಕೆ ಇಲ್ಲಿನ ಬಾಂದ್ರಾ ರೈಲು ನಿಲ್ದಾಣದಿಂದ ಬಾಂದ್ರಾ-ಗೋರಖ್‌ಪುರ್ ಎಕ್ಸ್‌ಪ್ರೆಸ್‌ ರೈಲು ಹೊರಡಬೇಕಿತ್ತು. ಆದರೆ ರೈಲು 2.55ಕ್ಕೆ ಪ್ಲಾಟ್‌ಫಾರ್ಮ್‌ಗೆ ಆಗಮಿಸಿದೆ. ರೈಲು ಪ್ಲಾಟ್‌ಫಾರ್ಮ್‌ಗೆ ಬರುತ್ತಿದ್ದಂತೆ ಪ್ರಯಾಣಿಕರು ತಮ್ಮ ಸೀಟು ಹಿಡಿಯಲು ದಿಢೀರ್ ಮುಗಿಬಿದ್ದರು. ಹೀಗಾಗಿ ಕಾಲ್ತುಳಿತ ಸಂಭವಿಸಿ ಒಂಬತ್ತು ಮಂದಿ ಗಾಯಗೊಂಡರು. ಈ ಪೈಕಿ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಎಲ್ಲರನ್ನೂ ನಗರದ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಬಿರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದಾರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ (29), ಸಂಜಯ್ (27, ದಿವ್ಯಾಂಶು (18) ಮೊಹಮ್ಮದ್ ಶರೀಫ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಬಸ್​ನಲ್ಲಿ ಹಠಾತ್​ ಕಾಣಿಸಿಕೊಂಡ ಬೆಂಕಿ: ಪ್ರಯಾಣಿಕ ಸಜೀವ ದಹನ!

ABOUT THE AUTHOR

...view details