ಕರ್ನಾಟಕ

karnataka

ETV Bharat / bharat

ಚೆನ್ನೈ ಸಮೀಪ ಗೂಡ್ಸ್​ ರೈಲಿಗೆ ಮೈಸೂರು-ದರಭಂಗಾ ಎಕ್ಸ್​ಪ್ರೆಸ್​ ಡಿಕ್ಕಿ: ಹಳಿ ತಪ್ಪಿದ 13 ಬೋಗಿಗಳು

ಗೂಡ್ಸ್ ರೈಲಿಗೆ ಎಕ್ಸ್​ಪ್ರೆಸ್​ ರೈಲು ಡಿಕ್ಕಿ ಹೊಡೆದು 13 ಬೋಗಿಗಳು ಹಳಿ ತಪ್ಪಿ ಎರಡು ಬೋಗಿಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

By ETV Bharat Karnataka Team

Published : 5 hours ago

Updated : 4 hours ago

ಗೂಡ್ಸ್​ ರೈಲಿಗೆ ಮೈಸೂರು - ದರಭಂಗಾ ಎಕ್ಸ್​ಪ್ರೆಸ್​ ಡಿಕ್ಕಿ
ಗೂಡ್ಸ್​ ರೈಲಿಗೆ ಮೈಸೂರು - ದರಭಂಗಾ ಎಕ್ಸ್​ಪ್ರೆಸ್​ ಡಿಕ್ಕಿ (ETV Bharat)

ಚೆನ್ನೈ: ಮೈಸೂರಿನಿಂದ ದರ್ಭಾಂಗಕ್ಕೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್ ರೈಲು ಕವರಪೆಟ್ಟೈ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಜೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಘಡದಲ್ಲಿ ಪ್ರಯಾಣಿಕರಿದ್ದ 13 ಬೋಗಿಗಳು ಹಳಿ ತಪ್ಪಿವೆ. ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಮಿಳುನಾಡು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ಯಾಸೆಂಜರ್ ರೈಲಿನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಂಬ್ಯುಲೆನ್ಸ್​​ಗಳು ಸ್ಥಳದಲ್ಲಿವೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಈ ಅವಘಡದಿಂದಾಗಿ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಹೊರಡಬೇಕಿದ್ದ ರೈಲುಗಳು ವಿಳಂಬವಾಗಿವೆ.

ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿ, "ರಾತ್ರಿ 8.30ರ ಸುಮಾರಿಗೆ ಕವರೈಪ್ಪೆಟ್ಟೈ ಬಳಿ ಗೂಡ್ಸ್ ರೈಲಿಗೆ ಬಾಗಮತಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಆಂಬ್ಯುಲೆನ್ಸ್​ಗಳು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ದಕ್ಷಿಣ ರೈಲ್ವೆಯ ಪ್ರಧಾನ ವ್ಯವಸ್ಥಾಪಕರು, ಚೆನ್ನೈ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿದ್ದಾರೆ" ಎಂದು ತಿಳಿಸಿದ್ದಾರೆ.

ರೈಲ್ವೆ ಇಲಾಖೆ ಚೆನ್ನೈ ವಿಭಾಗದ ಸಹಾಯವಾಣಿ ಸಂಖ್ಯೆ 04425354151 ಮತ್ತು 04424354995 ಕರೆ ಮಾಡಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ:ತಿರುಚಿ: ಹಾರಾಟದ ವೇಳೆ ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ; ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್‌

Last Updated : 4 hours ago

ABOUT THE AUTHOR

...view details