ನೋಯ್ಡಾ(ಉತ್ತರ ಪ್ರದೇಶ):ವಿವಾಹ ಮೆರವಣಿಗೆ ಸಂಭ್ರಮಾಚರಣೆಗೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ಇಬ್ಬರಿಗೆ ತಗುಲಿ ಗಾಯಗೊಂಡಿರುವ ಘಟನೆ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
"ಬಿಸ್ರಖ್ ಗ್ರಾಮದ ನಿವಾಸಿ ಅಲೋಕ್ ಎಂಬುವವರ ವಿವಾಹದ ಮೆರವಣಿಗೆ ಸಕಿಪುರ್ ಗ್ರಾಮದ ಆಶೀರ್ವಾದ್ ಮದುವೆ ಮನೆಗೆ ಬರುತ್ತಿತ್ತು. ಈ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಮದುವೆ ಮೆರವಣಿಗೆಯಲ್ಲಿದ್ದ ಕೆಲವರು ಸಂಭ್ರಮಾಚರಣೆಗೆಂದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅದು ಗುರಿ ತಪ್ಪಿ ಮೆರವಣಿಗೆಯಲ್ಲಿದ್ದ ಇಬ್ಬರಿಗೆ ತಗುಲಿದ್ದು, ಗಾಯಗೊಂಡಿದ್ದಾರೆ" ಎಂದು ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಅವರು ತಿಳಿಸಿದ್ದಾರೆ.