ಕರ್ನಾಟಕ

karnataka

By ETV Bharat Karnataka Team

Published : Jun 27, 2024, 4:34 PM IST

ETV Bharat / business

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ: ಸಿಎಂ ಸ್ಟಾಲಿನ್ ಘೋಷಣೆ - International Airport In Hosur

ಬೆಂಗಳೂರಿಗೆ ಹತ್ತಿರದಲ್ಲಿರುವ ತಮಿಳುನಾಡಿನ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಿಸುವುದಾಗಿ ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ.

ತಮಿಳು ನಾಡು ಸಿಎಂ ಸ್ಟಾಲಿನ್
ತಮಿಳು ನಾಡು ಸಿಎಂ ಸ್ಟಾಲಿನ್ (IANS)

ಚೆನ್ನೈ: ತಮಿಳುನಾಡಿನ ಹೊಸೂರಿನಲ್ಲಿ 2,000 ಎಕರೆ ಪ್ರದೇಶದಲ್ಲಿ ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಬಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಹೇಳಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಹೊಸ ಯೋಜನೆಯನ್ನು ಘೋಷಿಸಿದ ಸ್ಟಾಲಿನ್, ವಿಮಾನ ನಿಲ್ದಾಣವು ಹೊಸೂರು ಮಾತ್ರವಲ್ಲದೆ ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲೆಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೂ ಸಹಾಯಕವಾಗಲಿದೆ ಎಂದರು.

ಹೊಸೂರು ಆಯ್ಕೆ ಏಕೆ?: ಹೊಸೂರನ್ನು ಪ್ರಮುಖ ಆರ್ಥಿಕ ಬೆಳವಣಿಗೆಯ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸರ್ಕಾರ ಬಯಸಿದೆ. ಅಲ್ಲಿ ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಅಲ್ಲದೆ ಹೊಸೂರಿಗೆ ಮಾಸ್ಟರ್ ಪ್ಲಾನ್ ಅಂತಿಮಗೊಳಿಸಲಾಗುತ್ತಿದೆ ಎಂದು ಸ್ಟಾಲಿನ್ ತಿಳಿಸಿದರು. ಹೊಸೂರು ಕಳೆದ ಕೆಲ ವರ್ಷಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿ ಹೂಡಿಕೆಗಳನ್ನು ಆಕರ್ಷಿಸುತ್ತಿದೆ ಎಂದು ಅವರು ಹೇಳಿದರು.

ಈ ಘೋಷಣೆಯನ್ನು ಸ್ವಾಗತಿಸಿದ ರಾಜ್ಯ ಕೈಗಾರಿಕೆ ಮತ್ತು ಹೂಡಿಕೆ ಸಚಿವ ಟಿ.ಆರ್.ಬಿ.ರಾಜಾ, "ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣದ ಘೋಷಣೆಯು ಈ ಪ್ರದೇಶಕ್ಕೆ ಒಂದು ಮಹತ್ವದ ಕೊಡುಗೆಯಾಗಿದೆ. ಈ ಯೋಜನೆಯು ಸಂಪರ್ಕವನ್ನು ಹೆಚ್ಚಿಸಲಿದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲಿದೆ. ಇದು ಹೊಸೂರಿಗೆ ಮಾತ್ರವಲ್ಲದೆ ನೆರೆಯ ಜಿಲ್ಲೆಗಳಾದ ಧರ್ಮಪುರಿ ಮತ್ತು ಸೇಲಂ ಜಿಲ್ಲೆಗಳಿಗೆ ಅನುಕೂಲಕರವಾಗಲಿದೆ. ಜೊತೆಗೆ ಬೆಂಗಳೂರಿನ ವಿವಿಧ ಭಾಗಗಳಿಗೆ ಕೂಡ ಉಪಯುಕ್ತವಾಗಲಿದೆ" ಎಂದರು.

"ಹೊಸೂರು ಅತ್ಯುತ್ತಮ ಹವಾಮಾನವನ್ನು ಹೊಮದಿರುವುದರಿಂದ ಹೊಸ ವಿಮಾನ ನಿಲ್ದಾಣವು ಬೆಂಗಳೂರಿನೊಂದಿಗೆ ಅವಳಿ ನಗರದ ಮಾದರಿಯಲ್ಲಿ ಆರ್ಥಿಕ ವ್ಯವಸ್ಥೆಯನ್ನು ವ್ಯವಸ್ಥೆಯನ್ನು ಬೆಳೆಸುತ್ತದೆ. ಇದು ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ" ಎಂದು ರಾಜಾ ತಿಳಿಸಿದರು.

ಏಪ್ರಿಲ್ 2022ರಲ್ಲಿ, ರಾಜ್ಯದ ಅಂದಿನ ಕೈಗಾರಿಕಾ ಸಚಿವ ತಂಗಂ ತೇನರಸು ಅವರು ಹೊಸೂರು ಬಳಿ ಟಾಟಾ ಗ್ರೂಪ್​ನ ಬೃಹತ್ ಎಲೆಕ್ಟ್ರಾನಿಕ್ಸ್ ಉದ್ಯಮ ವಲಯದ ಹತ್ತಿರದಲ್ಲಿ 1,000 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗಾರಿಕಾ ವಸತಿ ಯೋಜನೆಯನ್ನು ಘೋಷಿಸಿದ್ದರು. ಜೊತೆಗೆ ಇಲ್ಲಿ ಸಿಪ್ಕಾಟ್​ನಿಂದ ಮತ್ತೊಂದು ಕೈಗಾರಿಕಾ ಎಸ್ಟೇಟ್ ಅಭಿವೃದ್ಧಿ ಪಡಿಸುವುದಾಗಿ ಮತ್ತು ಸಾರ್ವಜನಿಕ-ಖಾಸಗಿ-ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಅಸ್ತಿತ್ವದಲ್ಲಿರುವ ಕೇಂದ್ರಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದಾಗಿ ಹೇಳಿದ್ದರು.

ಕರ್ನಾಟಕ ಹಾಗೂ ತಮಿಳುನಾಡಿನ ಗಡಿಯಲ್ಲಿರುವ ಹೊಸೂರಿನಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಟಿವಿಎಸ್ ನಂತಹ ಪ್ರಮುಖ ಕಂಪನಿಗಳು ತಮ್ಮ ಕಾರ್ಖಾನೆಗಳನ್ನು ಹೊಂದಿವೆ. ಈ ಪ್ರದೇಶವು ಆಟೋ ಮತ್ತು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ, ಲಾಜಿಸ್ಟಿಕ್ಸ್ ಮತ್ತು ಎಲೆಕ್ಟ್ರಾನಿಕ್ಸ್​ ಉದ್ಯಮಗಳ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ:5ಜಿ ಸ್ಪೆಕ್ಟ್ರಮ್ ಹರಾಜು ಮುಕ್ತಾಯ: ₹11 ಸಾವಿರ ಕೋಟಿ ಮೌಲ್ಯದ ಬಿಡ್, ಮುಂಚೂಣಿಯಲ್ಲಿ ಏರ್​ಟೆಲ್ - 5G Spectrum Auction

ABOUT THE AUTHOR

...view details