ಡಾ. ವಿಷ್ಣುವರ್ಧನ್ ಅಭಿನಯದ ಸೂರ್ಯವಂಶ ಚಿತ್ರ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಈಗ ಅದೇ ಹೆಸರಿನ ಕಿರುತೆರೆಯಲ್ಲಿ ಸೀರಿಯಲ್ ಬರ್ತಾ ಇದೆ. ಒಂದು ವಿಶೇಷ ಏನಪ್ಪ ಅಂದರೆ ಕಿರುತೆರೆ ಹಾಗೂ ಬಿಗ್ ಸ್ಕ್ರೀನ್ನಲ್ಲಿ ಮೋಡಿ ಮಾಡಿದ ನಟ ಅನಿರುದ್ಧ್ ಈಗ ಸೂರ್ಯವಂಶದ ಕುಡಿಯಾಗಿ ಕಿರುತೆರೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ ’ಸೂರ್ಯವಂಶ’ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಬಯಕೆ. ವಂಶದ ಕುಡಿ 20 ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದೆ ಚಿಂತೆಗೆ ಕಾರಣವಾಗಿರುತ್ತದೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಆ ಹುಡುಗ ಸಿಗುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವುದರಿಂದ ಆತನು ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ.
ನಂತರ ಕರ್ಣನು ಸೂರ್ಯವಂಶಕ್ಕೆ ಕಾಲಿಟ್ಟ ನಂತರ ಎಲ್ಲಾ ಕಡೆಗಳಿಂದಲೂ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅದೇ ಊರಿನ ಕಾಳಿಂಗ ಆಟಾಟೋಪವನ್ನು ಬಗ್ಗು ಬಡಿಯಲು ಕರ್ಣನಿಂದ ಮಾತ್ರ ಸಾಧ್ಯ ಎಂದು ಊರ ಜನರು ನಂಬಿರುತ್ತಾರೆ. ಇದರ ಮಧ್ಯೆ ನಾಯಕಿ ಸುರಭಿ ಆಗಮನವಾಗುತ್ತದೆ. ಇದರಿಂದ ಕಥೆ ಹೊಸ ರೂಪ ಪಡೆದುಕೊಳ್ಳುತ್ತದೆ. ಮುಂದೆ ಕರ್ಣನೇ ಸೂರ್ಯವರ್ಧನ ಎನ್ನುವ ವಿಷಯ ತಿಳಿಯುತ್ತದೆ. ಅದು ಹೇಗೆ, ಯಾರಿಂದ, ಯಾವಾಗ ಎಂಬ ಸನ್ನಿವೇಶಗಳೊಂದಿಗೆ ರೋಚಕ ತಿರುವುಗಳು ಬರುತ್ತದೆ. ಪ್ರತಿ ಕಂತುಗಳು ಶ್ರೀಮಂತವಾಗಿ ಮೂಡಿಬಂದಿರುವುದು ವಿಶೇಷ.