ಕರ್ನಾಟಕ

karnataka

ETV Bharat / entertainment

ಯಲಾಕುನ್ನಿ ತೆರೆಗಪ್ಪಳಿಸಲು ಕೌಂಟ್​ಡೌನ್​ ಶುರು; ವಜ್ರಮುನಿ ಲುಕ್ ನಲ್ಲಿ ಪ್ರೇಕ್ಷಕರ ಮನ ಗೆಲ್ಲಲು ಕೋಮಲ್ ಸಜ್ಜು

ಇದೇ ವಾರ ಸಿನಿಮಾ ಬಿಡುಗಡೆಯಾಗಲಿದ್ದು, ಈ ಚಿತ್ರ ಯುವ ನಿರ್ದೇಶಕ ಎನ್​ಆರ್​​ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ವಜ್ರಮುನಿ ಲುಕ್ ನಲ್ಲಿ ಕೋಮಲ್
ವಜ್ರಮುನಿ ಲುಕ್ ನಲ್ಲಿ ಕೋಮಲ್ (ETV Bharat)

By ETV Bharat Karnataka Team

Published : 5 hours ago

ಚಂದನವನದಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ಇದೀಗ ದ್ವಿಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ. 'ಯಲಾಕುನ್ನಿ' ಸಿನಿಮಾದಲ್ಲಿ ಅವರು ವಜ್ರಮುನಿ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದು, ಇದೇ ವಾರ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಯುವ ನಿರ್ದೇಶಕ ಎನ್ ​ಆರ್​​ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಡೈರೆಕ್ಷನ್​ ಮಾಡಿದ್ದಾರೆ.

ಕೋಮಲ್​ ಜೊತೆಗೆ ಸಿನಿ ತಂಡದಲ್ಲಿ ದೊಡ್ಡ ದೊಡ್ಡ ಕಲಾವಿದರ ದಂಡೇ ಇದೆ. ಹಿರಿಯ ನಟರಾದ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರಕರ್, ಮಾನಸಿ ಸುಧೀರ್ (ಕಾಂತಾರ), ಜಗ್ಗೇಶ್ ಅವರ ಕಿರಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ, ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

ಯಲಾಕುನ್ನಿ ಸಿನಿಮಾದಲ್ಲಿ ನಟ ಕೋಮಲ್​ (ETV Bharat)

ಸಿನಿಮಾದ ಮತ್ತೊಂದು ವಿಶೇಷ ಎಂದರೆ ವಜ್ರಮುನಿ ಅವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ.

ಯಲಾಕುನ್ನಿ ಚಿತ್ರ ಬಿಡುಗಡೆಗೆ ಸಜ್ಜು (ETV Bharat)

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಈ ಚಿತ್ರ 'ಮೇರಾ ನಾಮ್ ವಜ್ರಮುನಿ' ಎಂಬ ಅಡಿಬರಹ ಹೊಂದಿದ್ದು, ಇದೇ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಪ್ರಶಾಂತ್ ನೀಲ್ ಬರೆದ 'ಬಘೀರ' ಕಥೆ ಕಣ್ಮುಚ್ಚಿ ಒಪ್ಪಿಕೊಂಡೆ: ನಟ ಶ್ರೀಮುರಳಿ

ABOUT THE AUTHOR

...view details