2025ರ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರೂ ಸೇರಿದಂತೆ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾ ಸೆಲೆಬ್ರಿಟಿಗಳೂ ಸೇರಿದಂತೆ ಕೋಟ್ಯಂತರ ಭಕ್ತರು ಪವಿತ್ರ ಕ್ಷಣದಲ್ಲಿ ಮಿಂದೆದ್ದಿದ್ದಾರೆ. ಇದೀಗ ರಾಜ್ ಬಿ ಶೆಟ್ಟಿ, ಅನುಶ್ರೀ ಸೇರಿ ಕೆಲ ಕನ್ನಡ ಸಿನಿ ಗಣ್ಯರು ಮಹಾಕುಂಭದಲ್ಲಿ ಭಾಗಿಯಾಗಿದ್ದಾರೆ.
ಅನುಶ್ರೀ ಪೋಸ್ಟ್ : ''ಸಂಗಮದಲ್ಲಿ ಮಿಂದು, ಕಣ್ಣುಗಳು ನೆಂದು, ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು! ಕೋಟಿ ಜನ ಸೇರೋ ಜಾಗ, ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ರೆ ಈ ದೈವಿಕ ಅನುಭವ ಸಿಗ್ತಿರ್ಲಿಲ್ಲ! 29/01/2025 ಮೌನಿ ಅಮಾವಾಸ್ಯೆ, ಹರ ಹರ ಮಹದೇವ್!'' ಎಂದು ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಇಲ್ಲಿ ಕನ್ನಡ ಸಿನಿಗಣ್ಯರನ್ನು ಜೊತೆಯಾಗಿ ಕಾಣಬಹುದು.
ರಾಜ್ ಬಿ ಶೆಟ್ಟಿ ಪೋಸ್ಟ್: ಕುಂಭಮೇಳದಲ್ಲಿ ಭಾಗಿಯಾದ ಮೂರು ಫೋಟೋಗಳನ್ನು ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ ರಾಜ್ ಬಿ ಶೆಟ್ಟಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ, ಮಹಾ ಕುಂಭ ಮತ್ತು ಭಾಗವಹಿಸಿದವರು ಎಂಬ ಕ್ಯಾಪ್ಷನ್ ನೀಡಿದ್ದಾರೆ.
ಕಿರಣ್ ರಾಜ್ ಪೋಸ್ಟ್ : ನಿರ್ದೆಶಕ ಕಿರಣ್ ರಾಜ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ನಲ್ಲಿ ಫೋಟೋಗಳನ್ನು ಹಂಚಿಕೊಂಡು, ಮೌನಿ ಅಮವಾಸ್ಯೆಯಂದು ಸಂಗಮದಲ್ಲಿ ಮಿಂದೆದ್ದಾಗ ಎಂದು ಬರೆದುಕೊಂಡಿದ್ದಾರೆ.