ಕರ್ನಾಟಕ

karnataka

By ETV Bharat Karnataka Team

Published : Aug 30, 2024, 3:59 PM IST

ETV Bharat / entertainment

ಕಾಮಿಡಿ ಕಿಲಾಡಿಗಳು‌ ಖ್ಯಾತಿಯ ಗಿಲ್ಲಿನಟ ಸಂತೋಷ್​​ 'ಸರ್ವೇ ನಂಬರ್ 45' ಚಿತ್ರಕ್ಕೆ ಚಾಲನೆ: ನಿರ್ದೇಶಕ ವಾಸು ಸಾಥ್ - Survey Number 45

ಹೊಸಬರೇ ಸೇರಿಕೊಂಡು ಮಾಡುತ್ತಿರುವ 'ಸರ್ವೇ ನಂಬರ್ 45' ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಬಂಡಿ ಮಹಾಕಾಳಮ್ಮನ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್.ವಾಸು ಕ್ಲಾಪ್ ಮಾಡಿದ್ರೆ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್ ಕ್ಯಾಮಾರಾ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು.

Survey Number 45 film team
'ಸರ್ವೇ ನಂಬರ್ 45' ಮುಹೂರ್ತ ಸಮಾರಂಭ (ETV Bharat)

ಕನ್ನಡ ಚಿತ್ರರಂಗದಲ್ಲಿ ಕಂಟೆಂಟ್ ಆಧಾರಿತ ಸಿನಿಮಾಗಳ ಜೊತೆಗೆ ವಿಭಿನ್ನ ಟ್ಯಾಲೆಂಟ್‌ ಇರುವ ಪ್ರತಿಭೆಗಳ ಆಗಮನ ಮುಂದುವರಿದಿದೆ. ಇದೀಗ ಹೊಸಬರೇ ಸೇರಿಕೊಂಡು ಮಾಡುತ್ತಿರುವ 'ಸರ್ವೇ ನಂಬರ್ 45' ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಶ್ರೀ ಬಂಡಿ ಮಹಾಂಕಾಳಮ್ಮನ ಸನ್ನಿಧಿಯಲ್ಲಿ ಅದ್ಧೂರಿಯಾಗಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ಪ್ರಥಮ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್.ವಾಸು ಕ್ಲಾಪ್ ಮಾಡಿದ್ರೆ, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್ ಕ್ಯಾಮರಾ ಆನ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಶರವಣ ಉಪಸ್ಥಿತರಿದ್ದರು.

ಹಿರಿಯ ನಿರ್ದೇಶಕರಾದ ಹೆಚ್.ವಾಸು ಮತ್ತು ಕೆ.ರಾಘವ ಅವರ ಬಳಿ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿರುವ ಪಿರಿಯಾಪಟ್ಟಣದ ಶಿವಕುಮಾರ್ ಎಂ ಶೆಟ್ಟಿಹಳ್ಳಿ ಅವರು ಈ 'ಸರ್ವೇ ನಂಬರ್ 45' ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳೋ ಮೂಲಕ ನಿರ್ದೇಶಕರಾಗುತ್ತಿದ್ದಾರೆ‌. ಈ ಹಿಂದೆ ಮಹದೇಶ್ವರ ಭಕ್ತಿ ಗೀತೆಗಳಿಗೆ ಸಾಹಿತ್ಯ ಬರೆದಿದ್ದ ಶಿವಕುಮಾರ್ ಈ ಸಿನಿಮಾಗೆ ರಚನೆ, ಚಿತ್ರಕಥೆ ಜೊತೆಗೆ ಮೂರು ಹಾಡುಗಳನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ.

'ಸರ್ವೇ ನಂಬರ್ 45' ಚಿತ್ರತಂಡ (ETV Bharat)

ಗ್ರಾಮೀಣ ಭಾಗದಲ್ಲಿ ಅದರಲ್ಲೂ ರೈತ ತನ್ನ ಜಮೀನಿನಲ್ಲಿ ಕೃಷಿ ಮಾಡುವ ಜಾಗಕ್ಕೆ 'ಸರ್ವೇ ನಂಬರ್' ಎಂದು ಸರ್ಕಾರ ನೀಡಿರುತ್ತದೆ. ಇದರ ಮಧ್ಯೆ ಆತನಿಗೆ ಒಂದಲ್ಲ ಒಂದು ಕಷ್ಟ ಬರುತ್ತಲೇ ಇರುತ್ತದೆ. ಅದನ್ನು ಚಾಣಾಕ್ಷತನದಿಂದ ಒಳ್ಳೆಯತನದಲ್ಲಿ ಹೇಗೆ ಬಗೆಹರಿಸಿಕೊಳ್ಳುತ್ತಾನೆ ಮತ್ತು ಕೆಟ್ಟದ್ದನ್ನು ಮಾಡಲು ಮುಂದಾದರೆ ಅನಾಹುತಗಳು ಕಟ್ಟಿಟ್ಟ ಬುತ್ತಿ ಎಂಬ ವಿಚಾರಗಳನ್ನು ನಿರ್ದೇಶಕರು ತಾವು ನೋಡಿದಂತ ಒಂದಷ್ಟು ಘಟನೆಗಳ ಜತೆಗೆ ಕಾಲ್ಪನಿಕ ಟಚ್ ಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ನಾವು ಒಳಿತನ್ನು ಬಯಸಿದರೆ ಒಳ್ಳೆಯದೇ ನಡೆಯುತ್ತದೆ. ಕೆಟ್ಟತನವನ್ನು ಆಯ್ಕೆ ಮಾಡಿಕೊಂಡರೆ ಅದೇ ಆಗುತ್ತದೆ ಎಂಬ ತೂಕದ ಸಂದೇಶವನ್ನು ಹೇಳಲಾಗುತ್ತಿದೆ.

ಇದನ್ನೂ ಓದಿ:ಮೀಡಿಯಾ ಬಗ್ಗೆ ದರ್ಶನ್ ಫ್ಯಾನ್ಸ್ ಆಕ್ಷೇಪಾರ್ಹ ಕೂಗು: ಬುದ್ದಿವಾದ ಹೇಳಿದ ಪೊಲೀಸ್ ಅಧಿಕಾರಿ - Darshan Fans On Media

ಕಾಮಿಡಿ ಕಿಲಾಡಿಗಳು ಖ್ಯಾತಿಯ ಗಿಲ್ಲಿನಟ ಸಂತೋಷ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲನಟಿಯಾಗಿದ್ದ ರಿಯಾಭಾಸ್ಕರ್ ಗೌಡರ ಮಗಳ ಪಾತ್ರದಲ್ಲಿ ನಾಲ್ಕನೇ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ಇವರೊಂದಿಗೆ ಮುನಿ, ಜಗದೀಶ್ ಕೊಪ್ಪ, ಸಂಜಯ್ ಪಾಟೀಲ್, ಮೈತ್ರಿ, ಟೋನಿತಾ, ರಾಜವ್ ಬಾಲೆ, ಪ್ರಕಾಶ್ ಬಾನಾಳು, ತೇಜು ಮೈಸೂರು, ಸುರೇಶ್ ಕೋಲಾರ, ರಂಗರಾಜು ಹುಲಿದುರ್ಗ ಮುಂತಾದವರು ನಟಿಸುತ್ತಿದ್ದಾರೆ.

'ಸರ್ವೇ ನಂಬರ್ 45' ಚಿತ್ರತಂಡ (ETV Bharat)

ಇದನ್ನೂ ಓದಿ:ವಿದೇಶದಲ್ಲಿ ಉಪೇಂದ್ರ ಸಾರಥ್ಯದ 'ಯುಐ' ಚಿತ್ರತಂಡ: ಸ್ಪೆಷಲ್​​ ವಿಡಿಯೋ ಹಂಚಿಕೊಂಡ ಅಜನೀಶ್​​ ಲೋಕನಾಥ್ - Upendra UI Film Team

ವರನಂದಿ ಸಿನಿ ಸಂಸ್ಥೆಯು ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದೆ. ಸಂಭಾಷಣೆ ಚಕ್ರಿ ಕಿರಿಸಾವೆ ಅವರದ್ದು. ವಿಶಾಲ್ ಅಲಾಪ್ ಸಂಗೀತ ಒದಗಿಸಿದರೆ, ಛಾಯಾಗ್ರಹಣವನ್ನು ದೀಪಕ್ ಕುಮಾರ್ ಜಿ.ಕೆ ನೋಡಿಕೊಂಡಿದ್ದಾರೆ. ಮೈಸೂರು, ಹಾಸನ, ಮಂಡ್ಯ ಸೇರಿದಂತೆ ಸುಂದರ ತಾಣಗಳಲ್ಲಿ ಎರಡು ಹಂತಗಳಂತೆ ಸೆಪ್ಟೆಂಬರ್ ಮೊದಲ ವಾರದಿಂದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

'ಸರ್ವೇ ನಂಬರ್ 45' ಕಲಾವಿದರು (ETV Bharat)

ABOUT THE AUTHOR

...view details