ಕರ್ನಾಟಕ

karnataka

By ETV Bharat Entertainment Team

Published : Sep 26, 2024, 5:25 PM IST

ETV Bharat / entertainment

'ಕೊರಗಜ್ಜ' ನಿರ್ದೇಶಕ ಸುಧೀರ್ ಅತ್ತಾವರ್​​ಗೆ ನಿರ್ಮಾಪಕರಿಂದ 20 ಲಕ್ಷದ ಕಾರ್ ಗಿಫ್ಟ್ - Koragajja

''ಕೊರಗಜ್ಜ'' ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರಿಂದ ಭರ್ಜರಿ ಉಡುಗೊರೆ ಸಿಕ್ಕಿದೆ. ಸಿನಿಮಾವನ್ನು ಡಿಸೆಂಬರ್​​​ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

Trivikrama gifted a car to 'Koragajja' director Sudhir
ನಿರ್ದೇಶಕ ಸುಧೀರ್ ಅತ್ತಾವರ್​​ಗೆ ಕಾರ್ ಗಿಫ್ಟ್ ಕೊಟ್ಟ ನಿರ್ಮಾಪಕ ತ್ರಿವಿಕ್ರಮ ಸಪಲ್ಯ (ETV Bharat)

ದಕ್ಷಿಣ ಕನ್ನಡ ಜನರು ಅಪಾರ ನಂಬಿಕೆ ಇಟ್ಟಿರುವ ದೈವ ''ಕೊರಗಜ್ಜ''ನ ಮೇಲೆ ಕನ್ನಡ ಚಿತ್ರರಂಗದಲ್ಲಿ ಸಿನಿಮಾ ಬರುತ್ತಿರೋದು ನಿಮಗೆ ತಿಳಿದಿರುವ ವಿಷಯ. ಈಗಾಗಲೇ ನಟರು ಹಾಗೂ ಚಿತ್ರದ ಶೀರ್ಷಿಕೆಯಿಂದ ಸದ್ದು ಮಾಡಿರುವ ಈ ಚಿತ್ರ ಬಿಡುಗಡೆಗೂ ಮುನ್ನ ಕೆಲ ವಿಚಾರಗಳಿಂದ ಗಮನ ಸೆಳೆಯುತ್ತಿದೆ. ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಅವರಿಂದ ಭರ್ಜರಿ ಉಡುಗೊರೆ ಸಿಕ್ಕಿದೆ.

ಹೌದು, ಈಗಾಗಲೇ ಕೊರಗಜ್ಜ ಸಿನಿಮಾ ನೋಡಿರುವ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದ ಗುಣಮಟ್ಟ, ತಾಂತ್ರಿಕತೆಗೆ ಮನಸೋತು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಟಾಪ್ ಎಂಡ್ ಕಿಯಾ ಕೇರನ್ಸ್ ಕಾರನ್ನು ಗಿಫ್ಟ್​​ ಮಾಡಿದ್ದಾರೆ. ಐಶಾರಾಮಿ ಕಾರು 20 ಲಕ್ಷ ರೂಪಾಯಿ ಮೌಲ್ಯದ್ದಾಗಿದೆ.

ನಿರ್ದೇಶಕ ಸುಧೀರ್ ಅತ್ತಾವರ್​​ಗೆ ಕಾರ್ ಗಿಫ್ಟ್ ಕೊಟ್ಟ ನಿರ್ಮಾಪಕ ತ್ರಿವಿಕ್ರಮ ಸಪಲ್ಯ (ETV Bharat)

ನಿರ್ದೇಶಕರ ಸೃಜನಶೀಲ ತಾಂತ್ರಿಕ ನೈಪುಣ್ಯತೆಯೊಂದಿಗೆ ಸುಮಾರು 15ಕೋಟಿ ಬಜೆಟ್​​ನ ಈ ಸಿನೆಮಾ ಯಾವ ಮಟ್ಟದಲ್ಲಿ ಮೂಡಿಬಂದಿರಬಹುದೆನ್ನುವುದಕ್ಕೆ ಇದು ಉದಾಹರಣೆ ಎಂದು ಖ್ಯಾತ ನಟಿ ಭವ್ಯ ಅವರು ಈ ಸಂದರ್ಭದಲ್ಲಿ ಹೇಳಿದರು. ನಾನು ಇಂತಹ ಸಿನಿಮಾದಲ್ಲಿ ಪಾರ್ಟ್ ಮಾಡಿದ್ದು ಇನ್ನಿಲ್ಲದ ಹೆಮ್ಮೆ ಮತ್ತು ಪುನೀತಭಾವ ಮೂಡಿಸಿದೆ ಎಂದು ಹೇಳಿದರು.

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಮಾತನಾಡಿ, ನನ್ನ ತ್ರಿವಿಕ್ರಮ ಸಿನೆಮಾಸ್ ಬ್ಯಾನರ್ ಅಡಿಯಲ್ಲಿ ಈ ಮಟ್ಟದಲ್ಲಿ ಸಿನಿಮಾ ಒಂದು ಮೂಡಿ ಬರುತ್ತದೆ ಎಂದು ನಾನು ಊಹಿಸಿರಲಿಲ್ಲ. ಕೊರಗಜ್ಜ ಸಿನಿಮಾ ಎಲ್ಲಾ ಊಹೆಯನ್ನು ಮೀರಿ ಅದ್ಭುತ ರೀತಿಯಲ್ಲಿ ಮೂಡಿಬಂದಿದೆ. ಭಾರತೀಯ ಚಿತ್ರರಂಗದಲ್ಲೇ ಇದೊಂದು ವಿಶಿಷ್ಟ ಸಿನಿಮಾ ಆಗಲಿದೆ. ನಿರ್ದೇಶಕರು ಸುಮಾರು ಒಂದೂವರೆ ವರ್ಷಗಳ ಕಾಲ ರಿಸರ್ಚ್ ಮಾಡಿ 800 ವರ್ಷಗಳ ಹಿಂದೆ ಬದುಕಿದ್ದ 23-24 ವರ್ಷ ಪ್ರಾಯದ "ತನಿಯಾ" ಎನ್ನುವ ಆದಿವಾಸಿ ಹುಡುಗ, ಮಹಾನ್ ಶಕ್ತಿ "ಕೊರಗಜ್ಜ" ಆಗಿ ಬೆಳಗುತ್ತಿರುವ ಬಗೆ ಹೇಗೆ ಎನ್ನುವುದನ್ನು ಕಣ್ಣಿಗೆ ಕಟ್ಟುವ ರೀತಿಯಲ್ಲಿ ಸಿನಿಮಾ ಮಾಡಿದ್ದಾರೆ. ಈ ಮಹಾನ್ ಶಕ್ತಿಯನ್ನು ಮರುಸೃಷ್ಟಿ ಮಾಡಿ ಸಸ್ಪೆನ್ಸ್, ಉತ್ಸುಕತೆ, ಥ್ರಿಲ್ಲರ್, ಊಹಿಸಲಾರದ ತಿರುವುಗಳ ಕಥಾಹಂದರ ಮತ್ತು ಬಿಗಿದಿಟ್ಟುಕೊಳ್ಳುವ ಆಕರ್ಷಣೀಯ ಸ್ಕ್ರೀನ್ ಪ್ಲೇ ಸಿನಿಮಾವನ್ನು ಬೇರೆಯದ್ದೇ ಮಜಲಿಗೆ ಕೊಂಡೊಯ್ದಿದೆ ಎಂದರು.

ನಿರ್ದೇಶಕ ಸುಧೀರ್ ಅತ್ತಾವರ್​​ಗೆ ಕಾರ್ ಗಿಫ್ಟ್ ಕೊಟ್ಟ ನಿರ್ಮಾಪಕ ತ್ರಿವಿಕ್ರಮ ಸಪಲ್ಯ (ETV Bharat)

ಕಬೀರ್ ಬೇಡಿ ಅಭಿನಯಿಸಿದ್ದ, ನೂರಾರು ಕಲಾವಿದರನ್ನು ಬಳಸಿಕೊಂಡು ಮೈನವಿರೇಳಿಸುವಂತೆ ಚಿತ್ರೀಕರಿಸಿದ್ದ ಯುದ್ಧ ಭೂಮಿಯ ಪರಿಕಲ್ಪನೆಯಂತೂ ಅದ್ಭುತವಾಗಿ ಮೂಡಿ ಬಂದಿದೆ. ಯುದ್ಧ ಸನ್ನಿವೇಷವನ್ನು ಚಿತ್ರೀಕರಿಸುವ ಸಮಯದಲ್ಲಿ ಕಬೀರ್ ಬೇಡಿ ಅವರು ಸುಧೀರ್ ಅತ್ತಾವರ್ ಅವರನ್ನು"ವಾಟರ್ ವರ್ಲ್ಡ್" ಚಿತ್ರದ ನಿರ್ದೇಶಕ ಕೆವಿನ್ ಹಾಲ್ ರೆಯ್ನಾಲ್ಡ್ಸ್ ಜೊತೆ ಏಕೆ ಕಂಪೇರ್ ಮಾಡಿದ್ದರು ಎನ್ನುವುದು ಈಗ ತಿಳಿದು ಬರುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ಮುಂಬೈನಲ್ಲಿ ಯಶ್​ ರಾಧಿಕಾ ಡಿನ್ನರ್​​ ಡೇಟ್​​: ಪ್ರೇಮಪಕ್ಷಿಗಳಿಗೆ ದೃಷ್ಟಿ ತಾಗದಿರಲಿ ಅಂತಾರೆ ಫ್ಯಾನ್ಸ್ - Yash Radhika Pandit

ನಿರ್ದೇಶನ ಮಾತ್ರವಲ್ಲದೇ, ಈ ಚಿತ್ರಕ್ಕೆ ಕಲಾ ನಿರ್ದೇಶನ, ಕಾಸ್ಟ್ಯೂಮ್ ಹಾಗೂ ಮೇಕಪ್ ಡಿಸೈನ್ ಕೂಡಾ ಸುಧೀರ್ ಅತ್ತಾವರ್ ಅವರೇ ಅದ್ಭುತವಾಗಿ ಮಾಡಿದ್ದಾರೆ ಎಂದು ತಮ್ಮ ನಿರ್ದೇಶಕನ ಮೇಲೆ ಹೆಮ್ಮೆ ವ್ಯಕ್ತಪಡಿಸಿದರು. ಸುಧೀರ್ ಅವರು ದೇಶಾದ್ಯಂತ ನೂರಾರು ನಾಟಕ ಪ್ರದರ್ಶನಗಳಲ್ಲಿ ಅಭಿನಯಿಸಿದ್ದಾರೆ. ಐವತ್ತರಷ್ಟು ನಾಟಕಗಳ ನಿರ್ದೇಶನ ಮಾಡಿದ್ದಾರೆ. ಮುಂಬೈನ "ಇಪ್ಟಾ" ಸೇರಿ ಮೊದಲಾದ ಸಂಸ್ಥೆಗಳೊಂದಿಗೆ ನಂಟು ಹೊಂದಿದ್ದಾರೆ. ಹೀಗೆ ರಂಗಭೂಮಿಯಲ್ಲಿ ಸಾಕಷ್ಟು ಪಳಗಿದ ಅನುಭದಿಂದ ಸಿನಿಮಾವನ್ನು ಈ ಮಟ್ಟಕ್ಕೆ ಮಾಡಲು ಸಾಧ್ಯವಾಯಿತೆಂದು ನಿರ್ದೇಶಕರು ಅಭಿಪ್ರಾಯ ಹಂಚಿಕೊಂಡರು.

ಇದನ್ನೂ ಓದಿ:ಎಸ್‌ಪಿ ಬಾಲಸುಬ್ರಹ್ಮಣ್ಯಂ ಜೊತೆ ಕೆಲಸ ಮಾಡುವ ಕನಸು ಕಂಡಿದ್ದ ಪುನೀತ್​ ರಾಜ್​​ಕುಮಾರ್​: 'ಮಾಯಾ ಬಜಾರ್‌'ನಲ್ಲಿ ನನಸು - Puneeth Rajkumar

ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ದೊಡ್ಡ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ "ಕೊರಗಜ್ಜ" ಸಿನಿಮಾವನ್ನು ಡಿಸೆಂಬರ್​​​ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ.

ABOUT THE AUTHOR

...view details