ಕರ್ನಾಟಕ

karnataka

By PTI

Published : Apr 1, 2024, 8:03 AM IST

ETV Bharat / international

ಶಸ್ತ್ರಸಜ್ಜಿತ ವ್ಯಕ್ತಿಯಿಂದ ಗುಂಡಿನ ದಾಳಿ: 8 ಜನರ ಸಾವು, ಎಂಟು ಜನರಿಗೆ ಗಾಯ - Gunmen Attacked

ದಕ್ಷಿಣ ಅಮೆರಿಕದಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಗುಂಡಿನ ದಾಳಿ ನಡೆಸಿ 8 ಜನರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಶಸ್ತ್ರಸಜ್ಜಿತ ವ್ಯಕ್ತಿಯಿಂದ ಗುಂಡಿನ ದಾಳಿ: 8ಜನರ ಸಾವು, ಎಂಟು ಜನರಿಗೆ ಗಾಯ
ಶಸ್ತ್ರಸಜ್ಜಿತ ವ್ಯಕ್ತಿಯಿಂದ ಗುಂಡಿನ ದಾಳಿ: 8ಜನರ ಸಾವು, ಎಂಟು ಜನರಿಗೆ ಗಾಯ

ಕ್ವಿಟೊ (ಈಕ್ವೆಡಾರ್):ಶಸ್ತ್ರಸಜ್ಜಿತ ಬಂದೂಕುಧಾರಿಗಳ ಗುಂಪೊಂದು ಈಕ್ವೆಡಾರ್‌ನ ಕರಾವಳಿ ನಗರವಾದ ಗುವಾಕ್ವಿಲ್‌ನಲ್ಲಿ ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿ ಎಂಟು ಜನರನ್ನು ಹತ್ಯೆ ಮಾಡಿರುವ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಇನ್ನೂ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಕ್ಷಿಣ ಅಮೆರಿಕದಲ್ಲಿ ಈ ವಾರದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಸ್ಥಳೀಯ ಕಾಲಮಾನ ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಅಪರಿಚಿತ ಬಂದೂಕುಧಾರಿಗಳು ಅಲ್ಲಿ ನೆರೆದಿದ್ದ ಜನರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನುಳಿದ ಆರು ಜನ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ 6 ಜನ ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಮಾಧ್ಯಮಗಳಿಗೆ ತಿಳಿಸಿದೆ.

ಇದಕ್ಕೂ ಮುನ್ನ ಶುಕ್ರವಾರದಂದು ಮನಾಬಿ ಕರಾವಳಿ ಪ್ರಾಂತ್ಯದಲ್ಲಿ ಶಸ್ತ್ರಸಜ್ಜಿತ ಗುಂಪೊಂದು 5 ಜನರನ್ನು ಅಪಹರಿಸಿ ಹತ್ಯೆ ಮಾಡಿದ್ದರು. ಘಟನೆಯಲ್ಲಿ ಮೃತ ಪಟ್ಟ ಐವರು ಮಾದಕವಸ್ತು ಕಳ್ಳಸಾಗಣೆ ವಿವಾದದಲ್ಲಿ ಗುರತಿಸಿಕೊಂಡಿದ್ದ ಪ್ರವಾಸಿಗರು ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದರು. ಐವರು ಅಪ್ರಾಪ್ತರು ಸೇರಿ ಒಟ್ಟು 11 ಜನರನ್ನು ಅಪಹರಿಸಲಾಗಿತ್ತು. ಈ ಪೈಕಿ 6 ಜನರನ್ನು ರಕ್ಷಣೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಯಾವ ದೇಶದ ಪ್ರಜೆಗಳು ಮತ್ತು ಅವರ ಹೆಸರನ್ನು ಬಹಿರಂಗ ಪಡಿಸಲು ಪೊಲೀಸರು ನಿರಾಕರಿಸಿದ್ದರು.

ಈ ಸಂಬಂಧ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಈಕ್ವೆಡಾರ್​ ಅಧ್ಯಕ್ಷ ಡೇನಿಯಲ್ ನೊಬೊವಾ ಮನಾಬಿಯಲ್ಲಿ ಹತ್ಯಾ ಸರಣಿ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ನಾರ್ಕೋಟೆರರಿಸಂ ಮತ್ತು ಅದರ ಮಿತ್ರ ಸಂಘಟನೆಗಳು ನಮ್ಮನ್ನು ಹೆದರಿಸಲೆಂದು ಇಂತಹ ಕೃತ್ಯಗಳನ್ನು ಎಸಗುತ್ತಿವೆ. ಆದರೆ, ಅದು ಎಂದಿಗೂ ಸಾಧ್ಯವಿಲ್ಲ ಎಂದು ತಿಳಿಸಿದ ನೊಬೋವಾ ಆರೋಪಿಯನ್ನು ಪೊಲೀಸ್​ ಅಧಿಕಾರಿಗಳು ಎಳೆದೊಯ್ಯುತ್ತಿರುವ ವಿಡಿಯೋವನ್ನು ಪೋಸ್ಟ್​ ಮಾಡಿದ್ದಾರೆ. ಈ ಹಿಂದೆ ಈಕ್ವೆಡಾರ್ ಶಾಂತಿಯುತವಾದ ತಾಣ ಎಂದು ಗುರುತಿಸಿಕೊಂಡಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹಿಂಸಾತ್ಮಕ ದಾಳಿಗಳು ಉಲ್ಬಣಗೊಂಡಿವೆ.

ಮಾ. 24ರಂದು, ಮನಾಬಿ ಪ್ರಾಂತ್ಯದ ಸಣ್ಣ ಪಟ್ಟಣವೊಂದರ 27 ವರ್ಷದ ಮೇಯರ್​ನನ್ನು ಹತ್ಯೆ ಮಾಡಲಾಗಿತ್ತು. ತನ್ನ ಸಹೊದ್ಯೋಗಿಯೆ ಕೃತ್ಯ ಎಸಗಿದ್ದ. ಬ್ರಿಗಿಟ್ಟೆ ಗಾರ್ಸಿಯಾ ಮತ್ತು ಜೈರೊ ಲೂರ್ ಗುಂಡೇಟಿನ ಗಾಯಗಳೊಂದಿಗೆ ವಾಹನದಲ್ಲಿ ಶವವಾಗಿ ಪತ್ತೆಯಾಗಿದ್ದರು.

ಇದನ್ನೂ ಓದಿ:ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್​ನ ಅತಿದೊಡ್ಡ ಉಷ್ಣ ವಿದ್ಯುತ್ ಸ್ಥಾವರ ಧ್ವಂಸ - Russia Ukraine War

ABOUT THE AUTHOR

...view details