ಕರ್ನಾಟಕ

karnataka

ETV Bharat / international

ವಿಯೆನ್ನಾ ಒಪ್ಪಂದ ಉಲ್ಲಂಘಿಸುವ ಯಾವುದೇ ರಾಜತಾಂತ್ರಿಕರನ್ನು ಸರ್ಕಾರ ಸಹಿಸುವುದಿಲ್ಲ: ಕೆನಡಾ ಎಚ್ಚರಿಕೆ - CANADA INDIA RIFT

ಕೆನಡಿಯನ್ನರ ಜೀವನವನ್ನು ಅಪಾಯಕ್ಕೆ ಸಿಲುಕಿಸುವ ಯಾವುದೇ ರಾಜತಾಂತ್ರಿಕರನ್ನು ಸರ್ಕಾರ ಸಹಿಸುವುದಿಲ್ಲ ಎಂದು ಕೆನಡಾ ವಿದೇಶಾಂಗ ಸಚಿವರು ಎಚ್ಚರಿಕೆ ನೀಡಿದ್ದಾರೆ.

indias-remaining-diplomats-clearly-on-notice-canadas-foreign-minister
ವಿಯೆನ್ನಾ ಒಪ್ಪಂದ ಉಲ್ಲಂಘಿಸುವ ಯಾವುದೇ ರಾಜತಾಂತ್ರಿಕರನ್ನು ಸರ್ಕಾರ ಸಹಿಸುವುದಿಲ್ಲ: ಕೆನಡಾ ಎಚ್ಚರಿಕೆ (IANS)

By PTI

Published : Oct 19, 2024, 7:07 AM IST

ಟೊರೊಂಟೊ, ಕೆನಡಾ:ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನರ್ ಸಿಖ್​​​​​​​​ ನಿಜ್ಜರ್​ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಾದ ಬಳಿಕ ಭಾರತೀಯ ರಾಜತಾಂತ್ರಿಕರಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವೆ ಮೆಲಾನಿ ಜೋಲಿ ಶುಕ್ರವಾರ ಹೇಳಿದ್ದಾರೆ.

ವಿಯೆನ್ನಾ ಒಪ್ಪಂದವನ್ನು ಉಲ್ಲಂಘಿಸುವ ಅಥವಾ ಕೆನಡಿಯನ್ನರ ಜೀವನವನ್ನು ಅಪಾಯಕ್ಕೆ ಸಿಲುಕಿಸುವ ಯಾವುದೇ ರಾಜತಾಂತ್ರಿಕರನ್ನು ಸರ್ಕಾರ ಸಹಿಸುವುದಿಲ್ಲ ಎಂದು ಜೋಲಿ ಇದೇ ವೇಳೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಭಾರತ ಕಳೆದ ಸೋಮವಾರ ಕೆನಡಾದ ಆರು ರಾಜತಾಂತ್ರಿಕರನ್ನು ದೇಶದಿಂದ ಹೊರಹಾಕಿದೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸಂಬಂಧ ಒಟ್ಟಾವಾದ ಆರೋಪಗಳನ್ನು ತಳ್ಳಿಹಾಕಿದ ಭಾರತ ಸರ್ಕಾರ, ಕೆನಡಾದಲ್ಲಿನ ತನ್ನ ಹೈಕಮಿಷನರ್ ಅನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಇದಕ್ಕೆ ಪ್ರತಿಯಾಗಿ ಕೆನಡಾ ಸಹ ಆರು ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಿದೆ. ಈ ಮೂಲಕ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿದೆ.

ಭಾರತವನ್ನು ರಷ್ಯಾಕ್ಕೆ ಹೋಲಿಸಿರುವ ಕೆನಡಾ ವಿದೇಶಾಂಗ ಸಚಿವರಾದ ಜೋಲಿ, ಭಾರತೀಯ ರಾಜತಾಂತ್ರಿಕರು ಕೆನಡಾದಲ್ಲಿ ನರಹತ್ಯೆಗಳು, ಕೊಲೆ ಬೆದರಿಕೆಗಳು ಮತ್ತು ಬೆದರಿಕೆಗಳಿಗೆ ಸಂಬಂಧಿಸಿದಂತೆ ಕೆನಡಾದ ರಾಷ್ಟ್ರೀಯ ಪೊಲೀಸ್ ಪಡೆ ಗಮನಿಸುತ್ತಿದೆ ಎಂದು ಹೇಳಿದ್ದಾರೆ.

ನಮ್ಮ ಇತಿಹಾಸದಲ್ಲಿ ನಾವು ಇಂತಹದ್ದನ್ನು ನೋಡಿಲ್ಲ. ಕೆನಡಾದ ನೆಲದಲ್ಲಿ ಆ ಮಟ್ಟದ ಅಂತರಾಷ್ಟ್ರೀಯ ದಮನ ನಡೆಯಲು ನಾವು ಬಿಡುವುದಿಲ್ಲ. ನಾವು ಯುರೋಪಿನ ಬೇರೆಡೆ ನೋಡಿದ್ದೇವೆ, ಜರ್ಮನಿ ಮತ್ತು ಯುಕೆಯಲ್ಲಿ ರಷ್ಯಾ ಇಂತಹದ್ದನ್ನು ಮಾಡಿದೆ ಮತ್ತು ನಾವು ಈ ವಿಷಯದಲ್ಲಿ ದೃಢವಾಗಿ ನಿಲ್ಲುವ ಅಗತ್ಯವಿದೆ ಎಂದು ಜೋಲಿ ಹೇಳಿದ್ದಾರೆ.

ಇತರ ಭಾರತೀಯ ರಾಜತಾಂತ್ರಿಕರನ್ನು ಹೊರಹಾಕಲಾಗುತ್ತದೆಯೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಜೋಲಿ, ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಒಟ್ಟಾವಾದಲ್ಲಿನ ಹೈಕಮಿಷನರ್ ಸೇರಿದಂತೆ ಆರು ಮಂದಿಯನ್ನು ಈಗಾಗಲೇ ಹೊರಹಾಕಲಾಗಿದೆ. ಇತರರು ಮುಖ್ಯವಾಗಿ ಟೊರೊಂಟೊ ಮತ್ತು ವ್ಯಾಂಕೋವರ್‌ನಿಂದ ಬಂದವರಿಗೆ ಸ್ಪಷ್ಟವಾಗಿ ಸೂಚನೆ ಕೊಡಲಾಗಿದೆ. ವಿಯೆನ್ನಾ ಸಮಾವೇಶಕ್ಕೆ ವಿರುದ್ಧವಾಗಿರುವ ಯಾವುದೇ ರಾಜತಾಂತ್ರಿಕರನ್ನು ನಾವು ಸಹಿಸುವುದಿಲ್ಲ ಎಂದು ಅವರು ಇದೇವೇಳೆ ಎಚ್ಚರಿಕೆ ನೀಡಿದ್ದಾರೆ.

ಬ್ರಿಟಿಷ್ ಕೊಲಂಬಿಯಾದ ಸರ್ರೆಯಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳ "ಸಂಭಾವ್ಯ" ಒಳಗೊಳ್ಳುವಿಕೆ ಇದೆ ಎಂದು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪ್ರಧಾನ ಮಂತ್ರಿ ಟ್ರುಡೊ ಆರೋಪಿಸಿದ್ದರು. ಟ್ರುಡೋ ಅವರ ಆರೋಪದ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ತೀವ್ರವಾಗಿ ಹದೆಗೆಡಲು ಆರಂಭಿಸಿದವು.

ಇದೇ ವೇಳೆ ಕೆನಡಾದ ಆರೋಪಗಳನ್ನು ಭಾರತವು ಅಸಂಬದ್ಧ ಮತ್ತು ರಾಜಕೀಯ ಪ್ರೇರಿತ ಎಂದು ತಿರಸ್ಕರಿಸಿದೆ. ಕೆನಡಾದಲ್ಲಿ ನೆಲೆಸಿರುವ ಖಲಿಸ್ತಾನ್ ಚಳವಳಿಯ ಬೆಂಬಲಿಗರ ಬಗ್ಗೆ ಮೃದು ಧೋರಣೆ ತೋರುತ್ತಿದೆ ಎಂದು ಭಾರತವು ಟ್ರುಡೊ ಅವರ ಸರ್ಕಾರವನ್ನು ಪದೇ ಪದೇ ಟೀಕಿಸಿದೆ.

ಇದನ್ನು ಓದಿ:ಕೆನಡಾ ಪ್ರಧಾನಿ ಟ್ರುಡೊ ಭಾರತ ವಿರೋಧಿ ಧೋರಣೆ ಅವಿವೇಕತನದ್ದು ಏಕೆ?: ವಿಶ್ಲೇಷಣೆ

ಪನ್ನು ಹತ್ಯೆ ಯತ್ನ: ಭಾರತದ ಅಧಿಕಾರಿಯ ಪಾತ್ರ ಇದೆ ಎಂದ ಅಮೆರಿಕ

ABOUT THE AUTHOR

...view details