ಕರ್ನಾಟಕ

karnataka

ETV Bharat / sports

ಭಾರತ-ಬಾಂಗ್ಲಾ ಕದನ​​: ಕನ್ನಡಿಗನಿಗೆ ತಂಡದಲ್ಲಿ ಮಹತ್ವದ ಜವಾಬ್ದಾರಿ! - INDIA VS BANGLADESH

ICC Champions Trophy 2025: ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಚಾಂಪಿಯನ್ಸ್​ ಟ್ರೋಫಿಯ ಎರಡನೇ ಪಂದ್ಯ ನಡೆಯಲಿದೆ. ತಂಡದಲ್ಲಿ ಕನ್ನಡಿಗನಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ.

INDIA VS BANGLADESH KL RAHUL  CHAMPIONS TROPHY  KL RAHUL  Ind vs Ban
ಟೀಂ ಇಂಡಿಯಾ (AFP)

By ETV Bharat Sports Team

Published : Feb 19, 2025, 8:54 PM IST

Updated : Feb 20, 2025, 6:13 AM IST

Ind vs Ban: ಐಸಿಸಿ ಚಾಂಪಿಯನ್ಸ್​ ಟ್ರೋಫಿಯ ಎರಡನೇ ಪಂದ್ಯ ಗುರುವಾರ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿ ಆಗುತ್ತಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಬಯಸುತ್ತಿವೆ. ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್​ ಮೈದಾನ ಆತಿಥ್ಯ ವಹಿಸಿದೆ.

ಭಾರತ-ಬಾಂಗಾದೇಶ ತಂಡಗಳು 2017ರಲ್ಲಿ ಒಮ್ಮೆ ಮಾತ್ರ ಚಾಂಪಿಯನ್ಸ್​ ಟ್ರೋಫಿಯಲ್ಲಿ ಮುಖಾಮುಖಿ ಆಗಿದ್ದವು. ಇದರಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲವು ಸಾಧಿಸಿತ್ತು. ಇದಾದ ಬಳಿಕ ಚಾಂಪಿಯನ್ಸ್​ ಟ್ರೋಫಿ ನಡೆಯದೇ ಇದ್ದ ಕಾರಣ ಉಭಯ ತಂಡಗಳಿಗೆ ಈ ಟೂರ್ನಿಯಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ.

ಇದೀಗ 8 ವರ್ಷಗಳ ನಂತರ ಇತ್ತಂಡಗಳು ಚಾಂಪಿಯನ್ಸ್​ ಟ್ರೋಫಿಯಲ್ಲಿ ಎದುರುಬದುರಾಗುತ್ತಿವೆ. ಈ ಬಾರಿಯ ಟೂರ್ನಿಯಲ್ಲಿ ಪ್ರತಿ ತಂಡಗಳಿಗೆ ಕೇವಲ ಮೂರು ಪಂದ್ಯಗಳನ್ನು ಮಾತ್ರ ಆಡುವ ಅವಕಾಶ ಇರುವ ಕಾರಣ ಎಲ್ಲಾ ಪಂದ್ಯಗಳು ಮಾಡು ಇಲ್ಲವೇ ಮಡಿಯಂತಾಗಿವೆ.

ಅದರಲ್ಲೂ 2013ರಲ್ಲಿ ಚಾಂಪಿಯನ್ಸ್​ ಟ್ರೋಫಿ ಗೆದ್ದುಕೊಂಡಿದ್ದ ಭಾರತ ಇದೀಗ ಮತ್ತೊಮ್ಮೆ ರೋಹಿತ್​ ಶರ್ಮಾ ನೇತೃತ್ವದಲ್ಲಿ ಚಾಂಪಿಯನ್​ ಆಗಲು ಬಯಸಿದೆ. ಇದಕ್ಕಾಗಿ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ.

ಕನ್ನಡಿಗನಿಗೆ ಮಹತ್ವದ ಹೊಣೆ:ಏತನ್ಮಧ್ಯೆ, ಇಂದಿನ ಪಂದ್ಯಕ್ಕೆ ತಂಡದಲ್ಲಿ ಕನ್ನಡಿಗ ಕೆ.ಎಲ್.ರಾಹುಲ್​ಗೆ ಮಹತ್ವದ ಜವಾಬ್ದಾರಿ ನೀಡಲಾಗುತ್ತಿದೆ. ಬಾಂಗ್ಲಾ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಾಹುಲ್​ ವಿಕೆಟ್​ ಕೀಪರ್​ ಆಗಿ ಕಣಕ್ಕಿಳಿಯಲಿದ್ದಾರೆ. ಇದರೊಂದಿಗೆ ಮತ್ತೊಂದು ಜವಾಬ್ದಾರಿಯನ್ನೂ ಅವರ ಹೆಗಲಿಗೆ ನೀಡಲಾಗುತ್ತಿದೆ.

ಇಂದಿನ ಪಂದ್ಯದಲ್ಲಿ ಯಾರು, ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಲಿದ್ದಾರೆ ಎಂಬುದರ ಬಗ್ಗೆ ಈಗಾಗಲೇ ನಿರ್ಧಾರವಾಗಿದ್ದು, ರಾಹುಲ್​ ಅವರಿಗೆ ಫಿನಿಶರ್​ ಜವಾಬ್ದಾರಿ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಲ್ಲದೆ ರಾಹುಲ್​ 5 ಅಥವಾ 6ನೇ ಕ್ರಮಾಂಕದಲ್ಲಿ ಫಿನಶರ್​ ರೋಲ್​ ಪ್ಲೇ ಮಾಡಲಿದ್ದಾರೆ. 5ನೇ ಕ್ರಮಾಂದಲ್ಲಿ ರಾಹುಲ್​ ಅವರ ದಾಖಲೆ ಉತ್ತಮವಾಗಿದ್ದು ಬಹುತೇಕ ಇದೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರುವ ಸಾಧ್ಯತೆ ಇದೆ.

ಚಾಂಪಿಯನ್ಸ್​ ಟ್ರೋಫಿಗೂ ಮೊದಲು ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಸರಣಿಯಲ್ಲಿ ಮೊದಲೆರಡು ಪಂದ್ಯಗಳಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿದ್ದ ರಾಹುಲ್​ ಬಹುಬೇಗ ನಿರ್ಗಮಿಸಿದ್ದರು. ಆ ಬಳಿಕ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟ್​ ಮಾಡಿ 40 ರನ್​ ಚಚ್ಚಿದ್ದರು. ಸದ್ಯ ಅದೇ ಕ್ರಮಾಂಕದಲ್ಲಿ ರಾಹುಲ್​ ಅವರನ್ನು ಮುಂದುವರೆಸಲು ತಂಡ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಸಂಭಾವ್ಯ ಭಾರತ ತಂಡ: ರೋಹಿತ್​ ಶರ್ಮಾ (ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಶ್ರೇಯಸ್​ ಅಯ್ಯರ್​, ಅಕ್ಷರ್​ ಪಟೇಲ್​, ಕೆ.ಎಲ್.ರಾಹುಲ್​ (ವಿ.ಕೀ) ಹಾರ್ದಿಕ್​ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್​ ಯಾದವ್​, ಅರ್ಷದೀಪ್​ ಸಿಂಗ್​, ಮೊಹಮ್ಮದ್​ ಶಮಿ.

ಇದನ್ನೂ ಓದಿ:ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌: ಕರಾಚಿ ಸ್ಟೇಡಿಯಂನಲ್ಲಿ ಹಾರಾಡಿದ ತಿರಂಗ

ಇದನ್ನೂ ಓದಿ: ಪಾಕಿಸ್ತಾನಕ್ಕೆ ​ಪ್ರಯಾಣಿಸಲಿರುವ ಮೂವರು ಭಾರತೀಯ ಕ್ರಿಕೆಟರ್ಸ್​​ ! ಕಾರಣವೇನು?

Last Updated : Feb 20, 2025, 6:13 AM IST

ABOUT THE AUTHOR

...view details