ಕರ್ನಾಟಕ

karnataka

ETV Bharat / sports

Video: ಅಭ್ಯಾಸ ವೇಳೆ ಚೆಂಡು ತಗುಲಿ ಕುಸಿದು ಬಿದ್ದ ಸ್ಟಾರ್​ ಪ್ಲೇಯರ್ - WICKET KEEPER INJURY

ಚಾಂಪಿಯನ್ಸ್​ ಟ್ರೋಫಿಗಾಗಿ ದುಬೈಗೆ ತೆರಳಿರುವ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದ್ದು ಈ ವೇಳೆ ಸ್ಟಾರ್​ ಆಟಗಾರ ಗಾಯಗೊಂಡಿದ್ದಾರೆ.

ICC CHAMPIONS TROPHY 2025  RISHABH PANT  RISHABH PANT INJURY VIDEO  CHAMPIONS TROPHY RISHABH PANT
Rishabh pant and hardik Pandya (ANI)

By ETV Bharat Sports Team

Published : Feb 16, 2025, 10:07 PM IST

ಹೈದರಾಬಾದ್​: ಇನ್ನು ಮೂರು ದಿನಗಳಲ್ಲಿ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನವೆ ಭಾರತಕ್ಕೆ ದೊಡ್ಡ ಆತಂಕ ಎದುರಾಗಿದೆ. ಚಾಂಪಿಯನ್ಸ್​ ಟ್ರೋಫಿಗಾಗಿ ಈಗಾಗಲೇ ಟೀಮ್​ ಇಂಡಿಯಾ ಆಟಗಾರರು ದುಬೈಗೆ ತೆರಳಿದ್ದು ಭರ್ಜರಿ ಅಭ್ಯಾಸವನ್ನು ನಡೆಸಿದ್ದಾರೆ. ಇಂದು ದುಬೈನ ಐಸಿಸಿ ಅಕಾಡೆಮಿಯಲ್ಲಿ ನೆಟ್ ಸೆಷನ್‌ಗಳಲ್ಲೂ ಭಾಗವಹಿಸಿ ಬೆವರು ಸುರಿಸಿದ್ದಾರೆ.

ಆದರೆ ಅಭ್ಯಾಸದ ವೇಳೆ ಅನಿರೀಕ್ಷಿತ ಘಟನೆ ನಡೆದಿದ್ದ ಭಾರತೀಯ ಅಭಿಮಾನಿಗಳಿಗೆ ಭಾರೀ ಆತಂಕ ಹುಟ್ಟಿಸಿದೆ. ಹೌದು ಭಾರತದ ಸ್ಟಾರ್​ ಆಲ್​ರೌಂಡರ್​ ಹಾರ್ದಿಕ್​​ ಪಾಂಡ್ಯ ನೆಟ್ಸ್​ನಲ್ಲಿ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಅವರು ಹೊಡೆದ ಚೆಂಡು ನೇರವಾಗಿ ಹೋಗಿ ಮೈದಾನದಲ್ಲಿದ್ದ ರಿಷಭ್ ಪಂತ್ ಅವರ ಎಡ ಮೊಣಕಾಲಿಗೆ ಬಲವಾಗಿ ಬಡಿದಿದೆ. ಇದರಿಂದಾಗಿ ಪಂತ್ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ಚೆಂಡು ಬಲವಾಗಿ ತಗುಲಿದ ಪರಿಣಾಮ ಪಂತ್ ಕೆಲ ಸಮಯ ನೋವಿನಿಂದ ಒದ್ದಾಡಿದ್ದಾರೆ. ಈ ವೇಳೆ ಅಲ್ಲೆ ಇದ್ದ ಫೀಲ್ಡಿಂಗ್ ಕೋಚ್ ಮತ್ತು ವೈದ್ಯಕೀಯ ತಂಡ ಧಾವಿಸಿ ಪಂತ್ ಅವರಗೆ ಮೈದಾನದಲ್ಲೆ ಚಿಕಿತ್ಸೆ ನೀಡಿದ್ದಾರೆ.

ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪಂತ್​ ಅವರನ್ನು ಡ್ರೆಸ್ಸಿಂಗ್ ಕೋಣೆಗೆ ಕರೆದೊಯ್ಯಲಾಯಿತು. ಸ್ವಲ್ಪ ಸಮಯದ ನಂತರ ಪಂತ್ ಚೇತರಿಸಿಕೊಂಡು ಮತ್ತೆ ಅಭ್ಯಾಸಕ್ಕೆ ಮರಳಿದರು. ಆದರೆ ಅಭ್ಯಾಸದ ವೇಳೆ ಸಂಪೂರ್ಣ ಚೇತರಿಸಿಕೊಂಡಂತೆ ಕಾಣಲಿಲ್ಲ. 2022ರಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಪಂತ್​ ಅವರ ಕಾಲಿಗೆ ಗಾಯವಾಗಿದ್ದ ಕಡೆಗೆ ಚೆಂಡು ಬಡೆದಿದೆ. ಇದು ದೊಡ್ಡ ಗಾಯವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ತಂಡದ ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದೆ. ಪಂದ್ಯಾವಳಿಗೂ ಮುನ್ನವೆ ಈ ಘಟನೆ ನಡೆದಿದ್ದು ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ.

ಚಾಂಪಿಯನ್ಸ್​ ಟ್ರೋಫಿ:8 ವರ್ಷಗಳ ಬಳಿಕ ಚಾಂಪಿಯನ್ಸ್​ ಟ್ರೋಫಿ ನಡೆಯುತ್ತಿದೆ. ಈ ಹಿಂದೆ 2017ರಲ್ಲಿ ಕೊನೆಯ ಬಾರಿಗೆ ಪಂದ್ಯಾವಳಿ ನಡೆದಿತ್ತು. ಅದರಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿತ್ತು. 2025ರ ಚಾಂಪಿಯನ್ಸ್​ ಟ್ರೋಫಿಯ ಮೊದಲ ಪಂದ್ಯ ಫೆ​, 19 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಮುಖಾಮುಖಿಯಾಗಲಿವೆ. ಫೆ​, 20ರಂದ ಭಾರತ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಫೆ, 23 ರಂದು ಪಾಕಿಸ್ತಾನ ವಿರುದ್ಧ ಸೆಣಸಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಇದನ್ನೂ ಓದಿ:2 ವರ್ಷ ಆಯ್ತು ಎಲ್ಲದರಲ್ಲೂ ನನ್ನ ಬ್ಲಾಕ್​ ಮಾಡಿದ್ದಾರೆ: ಧವನ್ ಅಳಲು​!

ABOUT THE AUTHOR

...view details