Mohammed Siraj Champions Trophy: ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಪ್ರಾರಂಭವಾಗಿದೆ. ಮುಂದಿನ ವಾರ ಅಂದರೆ ಫೆಬ್ರವರಿ 19 ರಿಂದ 9ನೇ ಆವೃತ್ತಿ ಶುರುವಾಗಲಿದೆ. ಈ ಟೂರ್ನಿಯಲ್ಲಿ ಭಾರತ ಸೇರಿ ಒಟ್ಟು 8 ತಂಡಗಳು ಭಾಗಿಯಾಗುತ್ತಿವೆ. ಆದರೆ ಈ ಬಾರಿ ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಇಲ್ಲದೆ ಭಾರತ ತಂಡ ಕಣಕ್ಕಿಳಿಯುತ್ತಿದೆ.
ತಂಡದ ಪ್ರಮುಖ ಬೌಲರ್ ಆಗಿದ್ದ ಬುಮ್ರಾ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಗಾಯಕ್ಕೆ ತುತ್ತಾಗಿದ್ದರು. ಆ ಬಳಿಕ ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಮತ್ತು ಟಿ20 ಸರಣಿಯಿಂದಲೂ ಹೊರಗುಳಿದಿದ್ದರು. ಸದ್ಯ ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿದ್ದರು ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಮತ್ತೊಂದೆಡೆ ಅನುಭವಿ ಆಟಗಾರ ಮೊಹಮ್ಮದ್ ಸಿರಾಜ್ ಅವರನ್ನೂ ಆಯ್ಕೆ ಮಾಡದೆ ಇರುವುದು ಅಚ್ಚರಿಗೆ ಕಾರಣವಾಗಿದೆ.
ಬುಮ್ರಾ ಆಯ್ಕೆ ಮಾಡದಿರಲು ಕಾರಣ ಏನು ?ಗಾಯಕ್ಕೆ ತುತ್ತಾಗಿ ಚೇತರಿಸಿಕೊಂಡಿದ್ದ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಚೇತರಿಸಿಕೊಂಡಿದ್ದಾರೆ ಎಂದು ಮೆಡಿಕಲ್ ರಿಪೋರ್ಟ್ ಬಂದಿದ್ದರು ಅವರನ್ನು ಕೈಬಿಡಲಾಗಿದೆ. ಕಾರಣ ಬುಮ್ರಾ ಚೇತರಿಸಿಕೊಂಡಿದ್ದರು ಅವರು ಬೌಲಿಂಗ್ ಮಾಡುವ ಮತ್ತು ಟೂರ್ನಿಯ ಎಲ್ಲಾ ಪಂದ್ಯಗಳನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಮುಂಬರುವ ಪಂದ್ಯಾವಳಿಗಳನ್ನು ಗಮನದಲ್ಲಿಟ್ಟು ಕನಿಷ್ಠ 5 ವಾರಗಳ ಕಾಲ ಅವರನ್ನು ಕೆಲಸದ ಹೊರೆಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ. ಇದೇ ಕಾರಣಕ್ಕೆ ಆಯ್ಕೆ ಸಮಿತಿ ಕೂಡ ರಿಸ್ಕ್ ತೆದುಕೊಳ್ಳಲು ಮುಂದಾಗಲಿಲ್ಲ ಎಂದು ಪಿಟಿಐ ವರದಿ ಮಾಡಿದೆ.