ಕರ್ನಾಟಕ

karnataka

ತುಮಕೂರು ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ - road accident

By ETV Bharat Karnataka Team

Published : Sep 17, 2024, 9:33 PM IST

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರಿನ ದೊಡ್ಡಮಾವತ್ತೂರು ಟೋಲ್ ಬಳಿ ನಡೆದಿದೆ.

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ (ETV Bharat)

ತುಮಕೂರು:ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಡಿಸೇಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ದೊಡ್ಡಮಾವತ್ತೂರು ಟೋಲ್ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಟೋಲ್ ಸಂಪೂರ್ಣ ಜಖಂಗೊಂಡಿದ್ದು, ಲಾರಿ ಚಾಲಕ ಹಾಗೂ ಇಬ್ಬರು ಟೋಲ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಣಿಗಲ್ ಕಡೆಯಿಂದ ಮದ್ದೂರು ಕಡೆಗೆ ತೆರಳುತ್ತಿದ್ದ ಟೈಲ್ಸ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮದ್ದೂರು ಕಡೆಯಿಂದ ಕುಣಿಗಲ್ ಕಡೆಗೆ ಬರುತ್ತಿದ್ದ ಡಿಸೇಲ್ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಲ್ಲಿ ಲಾರಿಯೊಂದು ಟೋಲ್​ಗೆ ಗುದ್ದಿ ಟೋಲ್ ಸಿಬ್ಬಂದಿಗಳ ಕೊಠಡಿಗೆ ನುಗ್ಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅಮೃತೂರು , ಹುಲಿಯೂರುದುರ್ಗ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ನಂತರ ಡಿಸೇಲ್ ತುಂಬಿದ್ದ ಲಾರಿಯಿಂದ ಯಾವುದೇ ಅನಾಹುತ ಆಗದಂತೆ ಅಗ್ನಿಶಾಮಕ ಸಿಬ್ಬಂದಿಯಿಂದ ಅಗತ್ಯ ಕ್ರಮ ಕೈಗೊಂಡರು. ಮೂರು ಕ್ರೇನ್ ಗಳ ಮೂಲಕ ಲಾರಿಗಳನ್ನ ಮೇಲೆತ್ತಿ ಇತರ ವಾಹಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಯಿತು. ಗಾಯಾಳುಗಳನ್ನ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಆಗುತ್ತಿದ್ದಂತೆ ಟೈಲ್ಸ್ ತುಂಬಿದ್ದ ಲಾರಿ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇದನ್ನೂ ಓದಿ:ಗುಂಡ್ಲುಪೇಟೆಯಲ್ಲಿ ಭೀಕರ ಅಪಘಾತ: ಕೇರಳ ಮೂಲದ ಮೂವರ ದುರ್ಮರಣ - Bike Lorry Accident

ABOUT THE AUTHOR

...view details