ಕರ್ನಾಟಕ

karnataka

ETV Bharat / state

ಬೆಳಗಾವಿ; ಅಪಘಾತದಲ್ಲಿ 8 ವರ್ಷದ ಬಾಲಕ ಸಾವು, ಕಾರು ಚಾಲಕ ಪೊಲೀಸ್ ಠಾಣೆಗೆ ಶರಣು - ROAD ACCIDENT - ROAD ACCIDENT

ಅಪಘಾತದಲ್ಲಿ ಎಂಟು ವರ್ಷದ ಬಾಲಕನ ಸಾವಿಗೆ ಕಾರಣನಾಗಿದ್ದ ಕಾರು ಚಾಲಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಅಪಘಾತದಲ್ಲಿ 8 ವರ್ಷದ ಬಾಲಕ ಸಾವು
ಅಪಘಾತದಲ್ಲಿ 8 ವರ್ಷದ ಬಾಲಕ ಸಾವು (ETV Bharat)

By ETV Bharat Karnataka Team

Published : Jun 17, 2024, 5:38 PM IST

ಬೆಳಗಾವಿ: ಅಪಘಾತದಲ್ಲಿ ಎಂಟು ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ಸಾವಿಗೆ ಕಾರಣನಾಗಿದ್ದ ಕಾರು ಚಾಲಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.

ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ವಿನಯ್ ಲಕ್ಷ್ಮಣ ಕೆಂಚನ್ನವರ (8) ಮೃತ ಬಾಲಕ. ನಾಗನೂರು ಗ್ರಾಮದ ಮುರಾರ್ಜಿ ವಸತಿ ಶಾಲೆ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತನ್ನದೇ ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ಚಾಲಕ ಕರೆತಂದಿದ್ದ. ಬಾಲಕನನ್ನು ಪರೀಕ್ಷಿಸಿದ್ದ ಖಾಸಗಿ ಆಸ್ಪತ್ರೆಯ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಅಲಕನೂರ ಗ್ರಾಮದ ಕಾರು ಚಾಲಕ ದೇವಪ್ಪ ಅರ್ಜುನ ಯಲ್ಲಟ್ಟಿ ‌ತಮ್ಮ ಡಸ್ಟರ್ ಕಾರಿನಲ್ಲಿ ಗೋಕಾಕ್ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. ಸದ್ಯ ಗೋಕಾಕ್​ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕನ ಮೃತದೇಹ ಇದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಲಾರಿ - ಕಾರು ನಡುವೆ ಡಿಕ್ಕಿ: ಯಾದಗಿರಿ ಡಿಸಿ ಕಚೇರಿಯ ಇಬ್ಬರು ಸಿಬ್ಬಂದಿ ದುರ್ಮರಣ - Lorry Car Accident

ABOUT THE AUTHOR

...view details