ಕರ್ನಾಟಕ

karnataka

ETV Bharat / state

ತುಳುವಿಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ ನೀಡಲು 95ಶೇ ಕೆಲಸ ಸಂಪೂರ್ಣ, 5ಶೇ ಕೆಲಸವಷ್ಟೇ ಬಾಕಿ: ವೇದವ್ಯಾಸ ಕಾಮತ್ - Tulu

ತುಳು ಭಾಷೆಗೆ ಅಧಿಕೃತ ರಾಜ್ಯಭಾಷೆ ಸ್ಥಾನಮಾನ ನೀಡುವ ಹಿನ್ನೆಲೆ ಉರ್ವಸ್ಟೋರ್​ ತುಳುಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.

MLA Vedavyas Kamath
ಶಾಸಕ ವೇದವ್ಯಾಸ ಕಾಮತ್​

By ETV Bharat Karnataka Team

Published : Mar 7, 2024, 9:58 AM IST

ಮಂಗಳೂರು: "ತುಳು ಭಾಷೆಯನ್ನು ರಾಜ್ಯಭಾಷೆಯನ್ನಾಗಿ ಮಾಡುವ ಕುರಿತು ಈಗಾಗಲೇ ಮೂಡಬಿದಿರೆಯ ಡಾ. ಎಂ ಮೋಹನ್​ ಆಳ್ವ ನೇತೃತ್ವದ ನಿಯೋಗದ ವರದಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಬೇರೆ ರಾಜ್ಯಗಳು ಒಂದಕ್ಕಿಂತ ಅಧಿಕ ಭಾಷೆಗಳನ್ನು ಯಾವ ರೀತಿ ಅಧಿಕೃತ ಭಾಷೆಯನ್ನಾಗಿ ಮಾಡಿದವು ಎಂಬ ಸಂಪೂರ್ಣ ವರದಿಯನ್ನು ರಾಜ್ಯ ಸರ್ಕಾರ ಈಗಾಗಲೇ ಪಡೆದಿದೆ. ಇದೀಗ ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಮೂಲಕ ಕ್ಯಾಬಿನೆಟ್​ನಲ್ಲಿ ಆದೇಶಿಸಲು ಮಾತ್ರ ಬಾಕಿಯಿದೆ. 95 ಶೇಕಡಾ ಕೆಲಸಗಳು ಸಂಪೂರ್ಣಗೊಂಡಿದ್ದು, 5 ಶೇಕಡಾ ಕೆಲಸಗಳು ಮಾತ್ರ ಬಾಕಿಯಿದೆ. ಅದು ಕೂಡಾ ಆದಷ್ಟು ಶೀಘ್ರದಲ್ಲಿ ಆಗಬೇಕೆನ್ನುವುದು ನಮ್ಮ ಆಶಯ" ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ತುಳು ಭಾಷೆಗೆ ರಾಜ್ಯಭಾಷೆಯ ಸ್ಥಾನಮಾನ ದೊರಕಬೇಕು ಎನ್ನುವ ನಿಟ್ಟಿನಲ್ಲಿ ಮಂಗಳೂರು ಉರ್ವಸ್ಟೋರ್​ನ ತುಳುಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, "ತುಳುನಾಡಿನ ಎಲ್ಲಾ ಪಕ್ಷಗಳ ಮುಖಂಡರು ಪಕ್ಷ ಭೇದ ಮರೆತು ತುಳು ಭಾಷೆಯ ಸ್ಥಾನಮಾನಕ್ಕಾಗಿ ಹೋರಾಟ ಮಾಡಬೇಕು. ತುಳು ರಾಜ್ಯಭಾಷೆಯಾದರೆ ವಿಧಾನಸಭೆಯಲ್ಲಿ ನಾವು ತುಳುವಿನಲ್ಲಿ ಮಾತನಾಡಿದರೆ ಅದು ದಾಖಲೆಗೆ ಸೇರುತ್ತದೆ" ಎಂದು ಹೇಳಿದರು.

ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷ, ಜಾತಿ ಬೇಧ ಮರೆತು ಎಲ್ಲರೂ ಒಗ್ಗಟ್ಟಾಗಿ ಪಾಲ್ಗೊಂಡರು. ಜೊತೆಗೆ ತುಳುಭಾಷೆಗೆ ಅಧಿಕೃತ ಸ್ಥಾನಮಾನ ದೊರಕಬೇಕೆಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಆ ಬಳಿಕವೂ ಸರ್ಕಾರದಿಂದ ವೇಗ ದೊರಕದಿದ್ದಲ್ಲಿ ಹೋರಾಟ, ಉಪವಾಸ ಸತ್ಯಾಗ್ರಹಕ್ಕೂ ಸನ್ನದ್ಧವಾಗಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.

ಮಾಜಿ ಶಾಸಕ ಮೊಯ್ದೀನ್ ಬಾವಾ ಮಾತನಾಡಿ, "ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಕ್ಕಿದ್ದಲ್ಲಿ ಹೊರಗಿನಿಂದ ಬಂದ ಕಂಪೆನಿಗಳಲ್ಲಿ ಸ್ಥಳೀಯ ಯುವಕರಿಗೆ ಕೆಲಸ ದೊರೆಯುತ್ತದೆ. ಉಡುಪಿ, ದ.ಕ. ಜಿಲ್ಲೆಯ ಸಂಸತ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ತುಳು ಅಧಿಕೃತ ಭಾಷೆ ಮಾಡುವ ಬಗ್ಗೆ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಬೇಕು" ಎಂದು ಹೇಳಿದರು.

ಇದನ್ನೂ ಓದಿ:ತುಳುವಿಗೆ 2ನೇ ಭಾಷೆ ಸ್ಥಾನಮಾನ ವಿಚಾರ: ದ್ವಿಭಾಷಾ ರಾಜ್ಯಗಳಿಗೆ ತೆರಳಿ ಅಧ್ಯಯನ ನಡೆಸಲು ತಂಡ ರಚನೆ

ABOUT THE AUTHOR

...view details