ಕರ್ನಾಟಕ

karnataka

ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ 67.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು - Diamond Jewellery Stolen

By ETV Bharat Karnataka Team

Published : Jul 2, 2024, 4:28 PM IST

ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ 67.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

TRAVELING IN A BUS  DIAMOND JEWELERY  DAKSHINA KANNADA
ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ 67.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು (ETV Bharat)

ಮಂಗಳೂರು:ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್ ಕಳ್ಳತನವಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳ ಜೊತೆ ನಾನಾ ನಮೂನೆಯ ಚಿನ್ನಾಭರಣಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆ ಮನೆಗೆ ತಂದಿದ್ದರು. ಇದನ್ನು ಹ್ಯಾಂಡ್‌ಬ್ಯಾಗ್​ನಲ್ಲಿ ಹಾಕಿ ಜೂ.19ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್​ಟಿಸಿ ಐರಾವತ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದರು.

ಹಾಸನ ತಲುಪಿದಾಗ ಅವರ ಹ್ಯಾಂಡ್ ಬ್ಯಾಗ್ ಪರಿಶೀಲಿಸಿದ್ದರು. ಈ ವೇಳೆ ಬ್ಯಾಗ್​ನಲ್ಲಿಟ್ಟಿದ್ದ ಚಿನ್ನಾಭರಣಗಳು ಮಾಯವಾಗಿದ್ದವು. ಮಂಗಳೂರು - ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ಚಿನ್ನಾಭರಣ ಕಳೆದುಕೊಂಡ ಮಹಿಳೆ ಜುಲೈ 1ರಂದು ಉರ್ವ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನು ವಜ್ರದ ಜೊತೆ ಬಂಗಾರ ಕಳೆದುಕೊಂಡಿರುವ ಮಹಿಳೆ ಸುಮಾರು 10-12 ದಿನಗಳ ಬಳಿಕ ದೂರು ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಮಹಿಳೆ ನೀಡಿರುವ ದೂರನ್ನು ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಓದಿ:ಮಂಗಳೂರು: ಬಂಗ್ರಕೂಳೂರು ಎ.ಜೆ.ಇಂಜಿನಿಯರಿಂಗ್ ಕಾಲೇಜು ರಸ್ತೆ ಕುಸಿತ - road collapse

ABOUT THE AUTHOR

...view details