ಚಿಕ್ಕಬಳ್ಳಾಪುರ:ಗಣೇಶ ನಿಮಜ್ಜನ ವೇಳೆ ಡ್ಯಾನ್ಸ್ ಮಾಡಬೇಡ ಎಂದು ಹೇಳಿದ್ದಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಕ್ಕಪೈಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಿರೀಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮಂಜುನಾಥ ಹಾಗೂ ಲಕ್ಷ್ಮಿನರಸಮ್ಮ ದಂಪತಿಗಳ ಇಬ್ಬರು ಮಕ್ಕಳಲ್ಲಿ ಒಬ್ಬರಾದ ಗಿರೀಶ್ ರಾತ್ರಿ ಗ್ರಾಮದಲ್ಲಿ ಗಣೇಶ ಮೂರ್ತಿ ನಿಮಜ್ಜನ ವೇಳೆ ಡ್ಯಾನ್ಸ್ ಮಾಡಿದ್ದನು. ಇದನ್ನು ಗಮನಿಸಿದ ಅಣ್ಣ ಈ ರೀತಿಯಾಗಿ ಡ್ಯಾನ್ಸ್ ಮಾಡಬೇಡ ಎಂದು ಬುದ್ಧಿವಾದ ಹೇಳಿದ್ದರು. ಇಷ್ಟಕ್ಕೆ ಮನನೊಂದ ಗಿರೀಶ್ ಮನೆಯ ಸಮೀಪ 100 ಮೀಟರ್ ದೂರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.