ಕರ್ನಾಟಕ

karnataka

ETV Bharat / state

ರೈತರ ಗಮನಕ್ಕೆ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ- ಲಿಂಕ್​ ಮಾಡಲು ಕೆಲವೇ ದಿನ ಬಾಕಿ - Aadhaar link to RTC

ಜುಲೈ ತಿಂಗಳು ಮುಗಿದ ನಂತರ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರ ನಿಲ್ಲಿಸಲಿದೆ. ರೈತರು ತಿಂಗಳ ಅಂತ್ಯದೊಳಗೆ ಕಡ್ಡಾಯವಾಗಿ ಪಹಣಿಗೆ ಆಧಾರ್ ಲಿಂಕ್​ ಮಾಡುವಂತೆ ಸೂಚಿಸಲಾಗಿದೆ.​

By ETV Bharat Karnataka Team

Published : Jul 4, 2024, 12:52 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ದಾವಣಗೆರೆ: ರೈತರು ತಮ್ಮ ಪಹಣಿಗೆ ಆಧಾರ್ ಕಾರ್ಡ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ. ಜುಲೈ ಅಂತ್ಯದೊಳಗೆ ಕಡ್ಡಾಯವಾಗಿ ಆಧಾರ್​ ಲೀಂಕ್​ ಮಾಡಿಸುವುದು ಕಡ್ಡಾಯ. ಯಾಕೆಂದರೆ ಜುಲೈ ತಿಂಗಳು ಮುಗಿದ ನಂತರ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರ ನಿಲ್ಲಿಸಲಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜೊತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಇದನ್ನು ಜಾರಿಗೆ ತಂದಿದೆ.

ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರ ಆಧಾರ್ ಕಾರ್ಡ್ ಲಿಂಕ್ ಮಾಡಲು ಜುಲೈ ಅಂತ್ಯದೊಳಗೆ ಗಡುವು ನೀಡಿದೆ. ರೈತರ ಜಮೀನುಗಳಿಗೆ ಆಧಾ‌ರ್ ಲಿಂಕ್ ಮಾಡಿಸುವ ಕಾರ್ಯ ಜುಲೈ ಅಂತ್ಯಕ್ಕೆ ಪೂರ್ಣಗೊಳಿಸಲು ಗುರಿ ಹೊಂದಲಾಗಿದೆ. ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವುದನ್ನು ತಡೆಯಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ಇದನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿನ ಎಲ್ಲಾ ಆಸ್ತಿಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಈ ಪ್ರಯುಕ್ತ ಬಾಕಿ ಇರುವ ರೈತರು ಇಂದೇ ಪಹಣಿ ಮತ್ತು ಆಧಾರ್ ಲಿಂಕ್ ಮಾಡಿಸಬೇಕಾಗಿದೆ.

ಆಧಾರ್ ಲಿಂಕ್ ಮಾಡಿಸುವುದು ಹೇಗೆ?: ಆಯಾ ಗ್ರಾಮ ಪಂಚಾಯತ್​ನ ಗ್ರಾಮ ಲೆಕ್ಕಾಧಿಕಾರಿಗಳ ಬಳಿ ರೈತರು ಪಹಣಿಗೆ ಆಧಾರ್ ಲಿಂಕ್ ಮಾಡಿಸಬಹುದಾಗಿದೆ. ಇದಲ್ಲದೆ ಫೋನ್​ ಮಾಡಿ ತಾವು ಇರುವ ಜಾಗದಿಂದಲೇ ಆಧಾರ್ ಒಟಿಪಿ ಹೇಳಿ ಪಹಣಿ & ಆಧಾರ್ ಲಿಂಕ್ ಮಾಡಿಸಬಹುದಾಗಿದೆ. ಆಧಾರ್ ಲಿಂಕ್ ಮಾಡಿಸಿದರೆ ನಿಮ್ಮ ಜಮೀನು ಬೇರೆಯವರ ಪಾಲಾಗದಂತೆ ತಡೆಯಬಹುದಾಗಿದೆ.

ಇದನ್ನೂ ಓದಿ:ಪಹಣಿಗೆ ಆಧಾರ್ ಲಿಂಕ್ ಮಾಡಿಸಿ ಆಸ್ತಿ ಉಳಿಸಿಕೊಳ್ಳಿ: ಮೊದಲ ಸ್ಥಾನದಲ್ಲಿದೆ ದಾವಣಗೆರೆ - Aadhaar Link To Pahani

ABOUT THE AUTHOR

...view details