ಕರ್ನಾಟಕ

karnataka

ನಟ ದರ್ಶನ್ ಪತ್ನಿಯಿಂದ ಕೊಲ್ಲೂರಿನಲ್ಲಿ ಚಂಡಿಕಾಯಾಗ - Darshan Wife Vijayalakshmi

By ETV Bharat Karnataka Team

Published : Jul 26, 2024, 9:32 AM IST

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ದರ್ಶನ್ ಬಂಧನ ಮುಕ್ತಿಗಾಗಿ ಪತ್ನಿಯಿಂದ ಕೊಲ್ಲೂರಿನಲ್ಲಿ ಚಂಡಿಕಾಯಾಗ
ದರ್ಶನ್ ಬಂಧನ ಮುಕ್ತಿಗಾಗಿ ಪತ್ನಿಯಿಂದ ಕೊಲ್ಲೂರಿನಲ್ಲಿ ಚಂಡಿಕಾಯಾಗ (ETV Bharat)

ನಟ ದರ್ಶನ್ ಪತ್ನಿಯಿಂದ ಮೂಕಾಂಬಿಕಾ ದೇಗುಲದಲ್ಲಿ ವಿಶೇಷ ಪೂಜೆ (ETV Bharat)

ಉಡುಪಿ:ನಟದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಗುರುವಾರ ತಮ್ಮ ಆಪ್ತರೊಂದಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದರು. ಗುರುವಾರ ಸಂಜೆ ಇಲ್ಲಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಶುಕ್ರವಾರ ಬೆಳಗ್ಗೆ ನವ ಚಂಡಿಕಾ ಹೋಮದಲ್ಲಿ ಭಾಗಿಯಾದರು.

ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಗುರುವಾರ ರಾತ್ರಿ ಕೊಲ್ಲೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಬೆಳಗ್ಗೆ ನವಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿನ ಅರ್ಚಕರಾದ ನರಸಿಂಹ ಅಡಿಗರವರ ನೇತೃತ್ವದಲ್ಲಿ ಚಂಡಿಕಾಯಾಗ ನಡೆಯಿತು. ಅರ್ಚಕ ಸುಬ್ರಹ್ಮಣ್ಯ ಅಡಿಗ ಚಂಡಿಕಾಯಾಗಕ್ಕೆ ಸಂಕಲ್ಪ ಮಾಡಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನ್ಯಾಯಂಗ ಬಂಧನಕ್ಕೊಳಗಾಗಿರುವ ದರ್ಶನ್ ಅವರು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ:'ನ್ಯಾಯದ ಮೇಲೆ ಭರವಸೆಯಿಡೋಣ': ಅಭಿಮಾನಿಗಳಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನವಿ - Vijayalakshmi Darshan

ABOUT THE AUTHOR

...view details