ಕರ್ನಾಟಕ

karnataka

ETV Bharat / state

ಸಂಕ್ರಾಂತಿ ಹಬ್ಬ: ವಾಯವ್ಯ ಸಾರಿಗೆಯಿಂದ ಹೆಚ್ಚುವರಿ ವಿಶೇಷ ಬಸ್‌ಗಳ​ ವ್ಯವಸ್ಥೆ - NWKSRTC SPECIAL BUS FOR SANKRANTI

ಎರಡನೇ ಶನಿವಾರ, ಭಾನುವಾರ ಸೇರಿದಂತೆ ಸರಣಿ ರಜೆಗಳಿರುವ ಕಾರಣ ಸಂಕ್ರಾಂತಿ ಹಬ್ಬಕ್ಕೆ ಬೇರೆ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಾಯವ್ಯ ಸಾರಿಗೆ ವಿಶೇಷ ಬಸ್​ ಸೌಲಭ್ಯ ಕಲ್ಪಿಸಿದೆ.

Government buses
ವಾ.ಕ.ರ.ಸಾ.ಸಂಸ್ಥೆ ಬಸ್‌ಗಳು (ETV Bharat)

By ETV Bharat Karnataka Team

Published : Jan 10, 2025, 10:41 AM IST

ಹುಬ್ಬಳ್ಳಿ:ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮೂರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 114 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಾಯುವ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳವಾರ ಸಂಕ್ರಾಂತಿ ಹಬ್ಬವಾಗಿದ್ದು, ಎರಡನೇ ಶನಿವಾರ ಹಾಗೂ ಭಾನುವಾರ ಆಗಿರುವ ಕಾರಣ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲಿದ್ದಾರೆ.

ಬೆಂಗಳೂರಿನಿಂದ ರಾಜ್ಯ/ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಶುಕ್ರವಾರ, 11 ಹಾಗೂ 13 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ 14 ಹಾಗೂ 15 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ‌ ನಡೆಸಲಿವೆ.

ಇದನ್ನೂ ಓದಿ:ಸಂಕ್ರಾಂತಿಗೆ ಬೆಂಗಳೂರಿನಿಂದ ಕಲಬುರಗಿ, ಕಾರವಾರಕ್ಕೆ ವಿಶೇಷ ರೈಲು; ಸಂಚಾರ ದಟ್ಟಣೆಗೆ ಕ್ರಮ

ABOUT THE AUTHOR

...view details