ಕರ್ನಾಟಕ

karnataka

’ನನ್ನ ಹೋರಾಟವನ್ನ ಕಾಂಗ್ರೆಸ್ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ’: ವಕೀಲ ದೇವರಾಜೇಗೌಡ - Advocate Devarajegowda

By ETV Bharat Karnataka Team

Published : May 6, 2024, 7:50 PM IST

Updated : May 6, 2024, 10:17 PM IST

ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್​ನ ನಾಯಕರಿಗೆ ರೇವಣ್ಣ ವಿಚಾರ ಬೇಕಿರಲಿಲ್ಲ ಎಂದು ವಕೀಲ ದೇವರಾಜೇಗೌಡ ತಿಳಿಸಿದ್ದಾರೆ.

advocate-devarajegowda
ವಕೀಲ ದೇವರಾಜೇಗೌಡ (etv bharath)

ವಕೀಲ ದೇವರಾಜೇಗೌಡ (etv bharat)

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್​​​​​ಡ್ರೈವ್​​​ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದೆ. ಹೆಚ್. ಡಿ. ರೇವಣ್ಣ ಅವರ ವಿರುದ್ಧದ ನನ್ನ ಹೋರಾಟವನ್ನ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್​ ಪಕ್ಷ ತನ್ನ ಅಸ್ತ್ರವಾಗಿ ಬಳಸುತ್ತಿದೆ ಎಂದು ವಕೀಲ ದೇವರಾಜೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಪ್ರೆಸ್ ಕ್ಲಬ್‌ನಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿ ಕರೆದ ದೇವರಾಜೇಗೌಡ, 'ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್‌ನ ನಾಯಕರಿಗೆ ರೇವಣ್ಣ ವಿಚಾರ ಬೇಕಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಹಾಗೂ ನೇರವಾಗಿ ನರೇಂದ್ರ ಮೋದಿ ಅವರು ಇಂಥವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ರಾಷ್ಟ್ರಮಟ್ಟದಲ್ಲಿ ಪ್ರಚಾರ ಮಾಡುವುದು ಬೇಕಾಗಿತ್ತು. ಇದಕ್ಕಾಗಿ ಡಿ. ಕೆ ಶಿವಕುಮಾರ್ ಅವರು ಎಲ್. ಆರ್ ಶಿವರಾಮೇಗೌಡರನ್ನ ಕಳುಹಿಸಿ ನನ್ನನ್ನ ಅವರೊಂದಿಗೆ ಕೈಜೋಡಿಸಲು ಕೇಳಿಕೊಂಡಿದ್ದರು' ಎಂದು ನೇರವಾಗಿ ಆರೋಪಿಸಿದ್ದಾರೆ.

ಎಲ್. ಆರ್ ಶಿವರಾಮೇಗೌಡ ಮಧ್ಯಸ್ಥಿಕೆಯಲ್ಲಿ ಡಿ. ಕೆ ಶಿವಕುಮಾರ್ ಅವರು ನನ್ನನ್ನ ಸಂಪರ್ಕಿಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಅಧಿಕಾರಕ್ಕೆ ತಂದಂತೆಯೇ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು , ನೀವು ನಮ್ಮ ಜೊತೆ ಬಾ, ನಮ್ಮೊಂದಿಗೆ ಕೈಜೋಡಿಸಿದರೆ ನಿನಗೆ ಎಲ್ಲ ರೀತಿಯ ಸಹಕಾರ ಮಾಡುತ್ತೇವೆ ಅಂತಾ ಕರೆದಿದ್ದಾರೆ ಎಂದು ವಕೀಲ ದೇವರಾಜೇಗೌಡ ಹೇಳಿದರು. ಈ ವಿಚಾರವನ್ನು ಎಲ್. ಆರ್ ಶಿವರಾಮೇಗೌಡ ಅವರೇ ಹೇಳಿದ್ದಾರೆ ಎಂಬುದಕ್ಕೆ ಪೂರಕವಾದ ಫೋನ್ ಸಂಭಾಷಣೆಯ ಆಡಿಯೋ ತುಣುಕನ್ನ ಇದೇ ಸಂದರ್ಭದಲ್ಲಿ ಅವರು ಬಿಡುಗಡೆಗೊಳಿಸಿದ್ದಾರೆ.

ಒಬ್ಬ ಕೊಲೆಗಾರ ವಕೀಲನ ಹತ್ರ ಬಂದಾಗ, ನಮ್ಮ ವಕೀಲ ವೃತ್ತಿಯಲ್ಲಿ ಏನು ಮಾಡಬೇಕು ಅದನ್ನ ಮಾಡಿದ್ದೇನೆ. ಕಾರು ಚಾಲಕ ಕಾರ್ತಿಕ್​ ನನ್ನ ಕಚೇರಿಗೆ ಬಂದು, ಒಂದು ಪೆನ್ ಡ್ರೈವ್ ಹಾಗೂ ‌ಕೆಲ ಡಾಕ್ಯುಮೆಂಟ್ ಕೊಡುತ್ತಾರೆ. ಅಶ್ಲೀಲ ವಿಡಿಯೋ ಕ್ಲಿಪ್​ ಹಾಗೂ ಪತ್ರಿಕೆ ಪೇಪರ್​ ಅನ್ನ ನಮ್ಮ ವಕೀಲರಿಗೆ ತಂದು ಕೊಡುತ್ತಾರೆ. ಇದಕ್ಕೆ ಪೂರಕವಾದ ಕೆಲ ಡಾಕ್ಯುಮೆಂಟ್ ‌ಕೊಡಿ ಎಂದು ಕೇಳಿದ್ದೇನೆ.

ಕಾರ್ತಿಕ್ ‌ನನ್ನ ಮನೆಗೆ ಯಾವಾಗ ಬಂದ? ನನ್ನ ಮನೆಯಲ್ಲಿ ‌ಕುಳಿತು‌ ಮಾತನಾಡಿರುವ ವಿಡಿಯೋ ಸಿಬಿಐಗೆ ಕೊಡುತ್ತಿದ್ದೇನೆ. ನಮಗೆ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವ ಎಸ್ಐಟಿ ತನಿಖೆ ಬೇಡ. ಎಸ್ಐಟಿ ತನಿಖಾಧಿಕಾರಿಗಳಿಗೆ ದಿನಕ್ಕೆ ನೂರಾರು ಸಲ ರಾಜಕೀಯ ನಾಯಕರ ಕರೆಗಳು ಬರುತ್ತಿವೆ. ಈ ಪ್ರಕರಣದ ಪಾರದರ್ಶಕ ತನಿಖೆ ನಡೆಯುವ ನಂಬಿಕೆಯಿಲ್ಲ. ಆದ್ದರಿಂದ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆಯೂ ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ಹೋರಾಟದ ಹಾದಿ ಹಿಡಿಯುವುದಾಗಿ ಇದೇ ಸಂದರ್ಭದಲ್ಲಿ ಎಚ್ಚರಿಕೆ ಕೂಡಾ ನೀಡಿದರು.

ಇದನ್ನೂ ಓದಿ :ಪ್ರಜ್ವಲ್ ರೇವಣ್ಣ ಪ್ರಕರಣ: ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ನಿರ್ಬಂಧ - Restraining Order

Last Updated : May 6, 2024, 10:17 PM IST

ABOUT THE AUTHOR

...view details