ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರದಲ್ಲಿ ಬೆಳಗಾವಿಯ ವಿಠ್ಠಲ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ - Attack On Devotees - ATTACK ON DEVOTEES

ಮಹಾರಾಷ್ಟ್ರದಲ್ಲಿ ಬೆಳಗಾವಿಯ ವಿಠ್ಠಲ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

DEADLY ATTACK  VITTHALA DEVOTEES  MAHARASHTRA PEOPLE ATTACK  BELAGAVI
ಮಹಾರಾಷ್ಟ್ರದಲ್ಲಿ ಬೆಳಗಾವಿಯ ವಿಠ್ಠಲ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ (ETV Bharat)

By ETV Bharat Karnataka Team

Published : Jul 20, 2024, 12:13 PM IST

ಬೆಳಗಾವಿ: ಪಂಡರಾಪುರ ವಿಠ್ಠಲನ ದರ್ಶನನಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಭಕ್ತರ ಮೇಲೆ ಮಹಾರಾಷ್ಟ್ರದ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಷಾಢ ಏಕಾದಶಿ ನಿಮಿತ್ತ ಪಂಡರಾಪುರದಲ್ಲಿ ವಿಠ್ಠಲನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಬೆಳಗಾವಿ ತಾಲೂಕಿನ ತುರಮುರಿ ಗ್ರಾಮದ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುರೇಶ್ ರಾಜುಕರ್, ಪರಶುರಾಮ ಜಾಧವ್ ಮತ್ತು ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸಾಂಗಲಿ ಜಿಲ್ಲೆ ಮಿರಜ್ ತಾಲೂಕಿನ ಮಾಲಗಾಂವ ಗ್ರಾಮದಲ್ಲಿ ಕಿಡಿಗೇಡಿಗಳು ಗೂಂಡಾವರ್ತನೆ ತೋರಿದ್ದಾರೆ. ಲಾರಿಯಲ್ಲಿ ವಾಪಸಾಗುತ್ತಿದ್ದ ವೇಳೆ ದಾರಿ ತಪ್ಪಿ ಮಾಲಗಾಂವ್​ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಲಾರಿಗೆ ಅಡ್ಡ ಬಂದ ಕಾರು ಚಾಲಕ ಕಿರಿಕ್ ಮಾಡಿದ್ದಾನೆ. ಬಳಿಕ ಪಾನಪತ್ತ ಕಿಡಿಗೇಡಿಗಳು ಭಕ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎಂಬ ಆರೋಪದಡಿ ದೂರು ದಾಖಲಾಗಿದೆ.

ಮೂವರು ಭಕ್ತರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀರಜ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರ್ನಾಟಕದ ಭಕ್ತರಿಗೆ ಸೂಕ್ತ ರಕ್ಷಣೆ ನೀಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಬೆಳಗಾವಿಯ ಭಕ್ತರು ಮನವಿ ಮಾಡಿದ್ದಾರೆ.

ಓದಿ:ಶಿರೂರು ಬಳಿ ಹೆದ್ದಾರಿಯ ಒಂದು ಬದಿ ಮಾತ್ರ ಮಣ್ಣು ತೆರವು, ಆದರೆ ಸಂಚಾರಕ್ಕೆ ಬಿಟ್ಟಿಲ್ಲ: ಜಿಲ್ಲಾಧಿಕಾರಿ ಲಕ್ಷಿಪ್ರಿಯ - Shiruru hill collapse case

ABOUT THE AUTHOR

...view details