ಕರ್ನಾಟಕ

karnataka

ದೆಹಲಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸು; NDA ಸಭೆಗೆ ಆಗಮಿಸುವಂತೆ ಹೆಚ್‌ಡಿಕೆಗೆ ಅಮಿತ್ ಶಾ ಆಹ್ವಾನ - NDA Meeting

By ETV Bharat Karnataka Team

Published : Jun 4, 2024, 3:46 PM IST

ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. ಇದೀಗ ಕೇಂದ್ರದಲ್ಲಿ ಮುಂದಿನ ಸರ್ಕಾರ ರಚನೆಯ ಕಸರತ್ತು ಶುರುವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ನಿಟ್ಟಿನಲ್ಲಿ ಕಸರತ್ತು ಬಿರುಸು ಪಡೆದಿದ್ದು, ಎನ್‌ಡಿಎ ಸಭೆಗೆ ಆಗಮಿಸುವಂತೆ ಹೆಚ್.ಡಿ.ಕುಮಾರಸ್ವಾಮಿಗೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ.

kumaraswamy
ಹೆಚ್.ಡಿ.ಕುಮಾರಸ್ವಾಮಿ, ಅಮಿತ್ ಶಾ (ETV Bharat)

ಬೆಂಗಳೂರು: ಲೋಕಸಭೆ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಂದಿದ್ದು ಬಿಜೆಪಿ, ಕೇಂದ್ರದಲ್ಲಿ ಸರ್ಕಾರ ರಚಿಸುವ ಕಸರತ್ತು ಆರಂಭಿಸಿದೆ. ಈ ನಿಟ್ಟಿನಲ್ಲಿ ನಾಳೆ ಎನ್​ಡಿಎ ನಾಯಕರ ಸಭೆ ಕರೆದಿದೆ. ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕದ ಮಿತ್ರಪಕ್ಷ ಜೆಡಿಎಸ್‌ಗೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಭಾರೀ ಅಂತರಿಂದ ಗೆದ್ದಿರುವ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ.ಕುಮಾರಸ್ವಾಮಿ ನಾಳೆ ನವದೆಹಲಿಗೆ ಪ್ರಯಾಣಿಸಲಿದ್ದಾರೆ.

ನಿರೀಕ್ಷಿತ ಪ್ರಮಾಣದ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕಸರತ್ತು ಶುರು ಮಾಡಿರುವ ಬಿಜೆಪಿ ನಾಯಕರು ಎನ್‌ಡಿ‌ಎ ನಾಯಕರ ಮಹತ್ವದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ಮೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಜೆಡಿಎಸ್, ಮಂಡ್ಯ ಮತ್ತು ಕೋಲಾರದಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ:ಮಂಡ್ಯ ಲೋಕಸಭಾ ಕ್ಷೇತ್ರ: ಗೆಲುವಿನ ಸನಿಹದಲ್ಲಿ ಮಾಜಿ ಸಿಎಂ ಹೆಚ್​​​ಡಿ ಕುಮಾರಸ್ವಾಮಿ - Mandya Loksabha Constituency

ABOUT THE AUTHOR

...view details