ಕರ್ನಾಟಕ

karnataka

ETV Bharat / state

ಯುವ ದಸರಾ: ರವಿ ಬಸ್ರೂರು ಮ್ಯೂಸಿಕ್​​ಗೆ ಕುಣಿದು ಕುಪ್ಪಳಿಸಿದ ಜನತೆ; ಪ್ರೇಕ್ಷಕರ ಮನಗೆದ್ದ ವಿವಿಧ ತಂಡಗಳು

ಯುವ ದಸರಾ ಭಾಗವಾಗಿ ಸಂಗೀತ ಮಾಂತ್ರಿಕ ರವಿ ಬಸ್ರೂರು ನೀಡಿದ ಮ್ಯೂಸಿಕ್​ ಪ್ರೋಗ್ರಾಮ್​ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

By ETV Bharat Karnataka Team

Published : 6 hours ago

Updated : 5 hours ago

Ravi Basrur music program
ಯುವ ದಸರಾದಲ್ಲಿ ರವಿ ಬಸ್ರೂರು ಮ್ಯೂಸಿಕ್ ಪ್ರೊಗ್ರಾಮ್​ (Photo source: ETV Bharat)

ಮೈಸೂರು: ಜಿದ್ದಿ ಜಿದ್ದಿ ಹೆ ತೂಫಾನ್ ಎಂದು ವೇದಿಕೆಗೆ ಆಗಮಿಸಿದ ಖ್ಯಾತ ಕನ್ನಡ ಸಂಗೀತ ಸಂಯೋಜಕರಾದ ರವಿ ಬಸ್ರೂರು ಅವರು ಕರುನಾಡ ಜನತೆಯ ಮನಮುಟ್ಟುವಂತೆ ಹಾಡಿ ಸಂಭ್ರಮಿಸಿದರು. ಉಗ್ರಂ ಚಿತ್ರದ ಉಗ್ರಂ ವಿರಾಮ್ ಗೀತೆಯನ್ನು ಹಾಡುತ್ತಾ ನೋಡುಗರ ಮೈ ಜುಮ್ ಎನಿಸುವಂತೆ ಮಾಡಿದರು. ಯುವ ದಸರಾ ಭಾಗವಾಗಿ ನಡೆದ ಈ ಕಾರ್ಯಕ್ರಮ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಉಗ್ರಂ ಚಿತ್ರದ ಮೂಲಕ ಗುರುತಿಸಿ, ಹೆಚ್ಚಿನ ಅವಕಾಶವನ್ನು ಕಲ್ಪಿಸಿ, ದೊಡ್ಡ ಮಟ್ಟದ ಸಾಧನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿರಿ ಎಂದು ಸರ್ವರಿಗೂ ಧನ್ಯವಾದ ಅರ್ಪಿಸುತ್ತಾ ಮೈಸೂರು ಜನತೆಗೆ ದಸರಾ ಶುಭಾಶಯ ಕೋರಿದರು. ನನ್ನ ಜೀವನದ ಮ್ಯೂಸಿಕ್ ಜರ್ನಿ ಆರಂಭವಾಗಿದ್ದು ಮೈಸೂರಿನಿಂದಲೇ. ಭಕ್ತಿಗೀತೆ ಮೂಲಕ ಆರಂಭಿಸಿದ ಪಯಣ ಇಂದು ಉನ್ನತ ಸ್ಥಾನಕ್ಕೆ ತಂದು ನಿಲ್ಲಿಸಿದೆ ಎಂದರು.

ಯುವ ದಸರಾದಲ್ಲಿ ರವಿ ಬಸ್ರೂರು (Photo source: ETV Bharat)

ನಂತರ, ರವಿ ಬಸ್ರೂರು ತಾವು ಸಂಯೋಜಿಸಿರುವ ವಿವಿಧ ಚಿತ್ರದ ಗೀತೆಗಳನ್ನು ಹಾಡಿ ಮೈಸೂರಿನ ಯುವ ಜನತೆಯ ಮನ ಸೆಳೆಯುವುದರ ಜೊತೆಗೆ ಕುಣಿದು ಕುಪ್ಪಳಿಸುವಂತೆ ಮಾಡಿದರು.

ರವಿ ಬಸ್ರೂರು ಮ್ಯೂಸಿಕ್​​ಗೆ ಕುಣಿದು ಕುಪ್ಪಳಿಸಿದ ಜನತೆ (Photo source: ETV Bharat)

ರೋಜ್ ಚಿತ್ರದ ನಾಯಕಿ ಸಾಧ್ವೀಕ ಅವರು ಡಿಸ್ಕೋ ಆಡಲಕ ಗಲ್ಲು ಗಲ್ಲು ಗೆಜ್ಜೆ ಕಟ್ಟಿನಿ, ಶೇಕ್ ಹಿಟ್ ಪುಷ್ಪವತಿ, ಬೇಬಿ ಡ್ಯಾನ್ಸ್ ಫ್ಲೋರ್ ರೆಡ್ಡಿ ಎಂಬ ಗೀತೆಗಳಿಗೆ ಹೆಜ್ಜೆ ಹಾಕಿದರು. ಕನ್ನಡ ನಾಡಿನ ಮೆಚ್ಚಿನ ನಟ ಪುನೀತ್ ರಾಜ್​​ಕುಮಾರ್ ಅವರ ಅಂಜನಿಪುತ್ರ ಚಿತ್ರದ ಗೀತೆಯನ್ನು ಹಾಡುವ ಮೂಲಕ ಅಪ್ಪು ಸ್ಮರಣೆ ನಡೆಯಿತು.

ಯುವ ದಸರಾ: ರವಿ ಬಸ್ರೂರು ಮ್ಯೂಸಿಕ್ (Photo source: ETV Bharat)

ರವಿ ಬಸ್ರೂರು ತಂಡದ ಗಾಯಕ ಗಾಯಕಿಯರಿಂದ ಸ್ಯಾಂಡಲ್​​ವುಡ್​​ ನೈಟ್ಸ್ ಕಾರ್ಯಕ್ರಮಕ್ಕೆ ಕಿಚ್ಚು ಹಚ್ಚಲಾಯಿತು. ಗಾಯಕಿ ವಿಜಯಲಕ್ಷ್ಮಿ ಅವರು ನಮಾಮಿ ನಮಾಮಿ ಈಶ್ವರ ಪದ ಪೂಜೀತಂ ಎಂಬ ಗೀತೆಯ ಮೂಲಕ ನೆರೆದಿದ್ದ ಯುವ ಸಮೂಹದ ಮೈ ರೋಮಾಂಚನಗೊಳಿಸಿದರು. ಗಾಯಕ ಸಂತೋಷ್ ವೆಂಕಿ ಅವರ ದ್ವಾಪರದಲ್ಲಿ ಶ್ರೀ ಕೃಷ್ಣ ಗೀತೆಯೂ ಯುವ ಮನಸುಗಳನ್ನು ಮುಟ್ಟಿತು. ಕನ್ನಡ ಕೋಗಿಲೆ ಖ್ಯಾತಿಯ ದಿವ್ಯ ರಾಮಚಂದ್ರ ಅವರ ಕನ್ನಡ ನಾನು ಕೋಳಿಗೆ ರಂಗ ಎಂಬ ಗೀತೆಗೆ ಮೈದಾನದಲ್ಲಿ ನೆರೆದಿದ್ದ ಯುವ ಸಮೂಹ ಹುಚ್ಛೆದ್ದು ಕುಣಿದು ಕುಪ್ಪಳಿಸಿತು. ಸಂತೋಷ್ ವೆಂಕಿ ಹಾಗೂ ಸಂಗಡಿಗರು ಮೈಸೂರು ದಸರಾ ಗೀತೆಯನ್ನು ವಿಭಿನ್ನ ಶೈಲಿಯಲ್ಲಿ ಹಾಡಿ ಮನ ಸೆಳೆದರು.

ಪ್ರೇಕ್ಷಕರ ಮನಗೆದ್ದ ಸಂಗೀತ ಮಾಂತ್ರಿಕ (Photo source: ETV Bharat)

ತೇರಿ ಮೇರಿ ಕಹಾನಿ ಎಂದು ಕಾರ್ಯಕ್ರಮ ಆರಂಭಿಸಿದ ಖ್ಯಾತ ಬಾಲಿವುಡ್ ಹಿನ್ನೆಲೆ ಗಾಯಕಿ ಧ್ವನಿ ಭಾನುಶಾಲಿ ಅವರ ಸುಮಧುರ ದನಿ ಯುವ ಮನಸ್ಸುಗಳನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮದ ಆರಂಭದ ಸಂದರ್ಭ, ತುಂತುರು ಮಳೆ ಕಾಣಿಸಿಕೊಂಡರೂ ಗೀತೆಗಳು ಯುವ ಮನಸುಗಳನ್ನು ಮೈದಾನದಲ್ಲೇ ಇರಿಸಿ ಕುಣಿದು ಕುಪ್ಪಳಿಸುವಂತೆ ಮಾಡಿತು.

ದಿಲ್ಬರ್ ದಿಲ್ಬರ್, ಪುಷ್ಪ ಚಿತ್ರದ ಹಿಂದಿ ವರ್ಷನ್ ಉ ಅಂಟಾವಾ ಗೀತೆಗೆ ತಮ್ಮ ತಂಡದ ಜೊತೆಗೆ ಹೆಜ್ಜೆ ಹಾಕಿ ನೋಡುಗರ ಕಣ್ಮನ ಸೆಳೆಯುತ ಶಿಲ್ಲೆ, ಚಪ್ಪಾಳೆಯ ಜಾತ್ರೆಯನ್ನೇ ಸೃಷ್ಟಿಸಿದರು. ಕೋಕಾ ಎಂಬ ಹಿಂದಿ ಗೀತೆಯನ್ನು ಹಾಡುತ್ತಾ ಯುವ ಮನಸ್ಸುಗಳನ್ನು ಸೆಳೆಯುವುದರ ಜೊತೆಗೆ ಕುಣಿದು ಕುಪ್ಪಳಿಸಿ ಎಲ್ಲರನ್ನೂ ರಂಜಿಸಿ ಎಲ್ಲರಿಗೂ ದಸರಾ ಹಬ್ಬದ ಶುಭ ಕೋರಿದರು. ಒಟ್ಟಾರೆಯಾಗಿ ಬಾಲಿವುಡ್ ಗಾಯಕಿಯ ಕಂಠ ಸೀರಿಗೆ ಮೈಸೂರು ಯುವ ಮನಸುಗಳು ಮನಸೊತು ಕುಣಿದು ಕುಪ್ಪಳಿಸಿ ಯುವ ದಸರಾವನ್ನು ಯಶಸ್ವಿಗೊಳಿಸಿದರು.

ಮೈಸೂರು ಜಿಲ್ಲಾ ಡ್ಯಾನ್ಸ್ ಕೊರಿಯೋಗ್ರಾಫರ್ ಅಸೋಸಿಯೇಷನ್ ತಂಡವು ಯುವ ದಸರಾ ಕಾರ್ಯಕ್ರಮಕ್ಕೆ ಮೆರಗು ತರುವಂತೆ ಕನ್ನಡ ಚಲನಚಿತ್ರದ ಪ್ರಮುಖ ನಾಯಕರಾದ ದರ್ಶನ್​, ಪುನೀತ್ ರಾಜ್​ಕುಮಾರ್, ಶಿವರಾಜ್​ಕುಮಾರ್, ಯಶ್ ಹೀಗೆ ವಿವಿಧ ಕಲಾವಿದರ ಚಿತ್ರಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು.

ಎರಡನೇ ದಿನದ ಯುವ ದಸರಾ ಕಾರ್ಯಕ್ರಮ ಆರಂಭಕ್ಕೂ ಮುನ್ನ ಯುವ ಸಂಭ್ರಮ ವೇದಿಕೆಯಲ್ಲಿ ಅವಕಾಶ ಸಿಗದ ವಿವಿಧ ಕಲಾತಂಡಗಳಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೆ ಆರ್ ನಗರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರಿಂದ ಸಮಾಜದಲ್ಲಿ ನಡೆಯುತ್ತಿರುವ ಅತ್ಯಾಚಾರ, ನ್ಯಾಯ, ಆಡಳಿತದ ಕುರಿತು ನೃತ್ಯದ ಮೂಲಕ ಸಾಮಾಜಿಕ ಸಂದೇಶವನ್ನು ಸಾರಿದರು.

ಮಡಿಕೇರಿಯ ಪ್ರಥಮ ದರ್ಜೆ ಕಾಲೇಜಿನ ಕಲಾ ತಂಡವು ತುಳು ನಾಡಿನ ವಿಶೇಷ ಯಕ್ಷಗಾನ ನೃತ್ಯ, ಕೊಡಗಿನ ಡ್ಯಾನ್ಸ್, ಕಾಡಿನ ಹಾಡಿಯ ಜನರ ಕಲಾಪ್ರಕಾರ ಹಾಗೂ ಕೊಡವ ವಿಶೇಷ ನೃತ್ಯದ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಒಂಟಿ ಕೊಪ್ಪಲು ವಿದ್ಯಾರ್ಥಿಗಳು ನಮ್ಮ ಮೈಸೂರು ಚಾಮರಾಜನಗರ ವಿಭಾಗದ ಪ್ರಮುಖ ಕಲೆಯಾದ ಡೊಳ್ಳು ಕುಣಿತ, ತಮಟೆ ವಾದ್ಯವನ್ನು ಭಾರಿಸುತ್ತಾ ಕರಗ, ಪೂಜಾ ಕುಣಿತ, ವೀರಗಾಸೆ ಮುಂತಾದ ಜನಪದ ಕಲೆಯನ್ನು ಪ್ರದರ್ಶಿಸಿದರು.
ಮಂಡ್ಯದ ಪಿ.ಈ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಮಲ್ಲಗಂಬ ಕ್ರೀಡೆಯನ್ನು ಪ್ರದರ್ಶಿಸಿ ನೋಡುಗರ ಮೈ ಜಮ್ ಎನ್ನುವಂತೆ ಮಾಡಿದರು.

ಮೈಸೂರಿನ ಟೆರಿಷಿಯನ್ ಕಾಲೇಜು ವಿದ್ಯಾರ್ಥಿನಿಯರ ತಂಡವು ದೇವರ ನಾಡು ಕೇರಳದ ಪ್ರಸಿದ್ದ ನೃತ್ಯವಾದ ಮೋಹಿನಿಯಾಟ್ಟಂ ಪ್ರದರ್ಶನವನ್ನು ನೀಡಿದರು. ಕರುಣಾಮಯಿ ಫೌಂಡೇಶನ್​ನ ವಿಶೇಷ ಮಕ್ಕಳ ಕಲಾತಂಡವು ಕರುನಾಡಿನ ವಿಶೇಷತೆಯ ಬಗ್ಗೆ ನೃತ್ಯ ಮಾಡಿ ತಮ್ಮ ಮುಗ್ಧ ನಡಿಗೆಯ ಮೂಲಕ ಮನಸೆಳೆದರು.

ಇದನ್ನೂ ಓದಿ:ಚಾಮರಾಜನಗರ ಯುವ ದಸರಾಗೆ ಚಾಲನೆ ನೀಡಿದ ನಟ ನಾಗಭೂಷಣ್: 'ಇಲ್ಲೇ ಪಿಡಿಒ ಆಗಿದ್ದೆ' ಎಂದ ಟಗರುಪಲ್ಯ ನಟ

ವಾಣಿವಿಲಾಸ ಅರಸು ಬಾಲಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ಕಂಡ ಶ್ರೇಷ್ಠ ಆಡಳಿತಗಾರ ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ ಸಾಧನೆ, ಆಡಳಿತವನ್ನು ತಮ್ಮ ನೃತ್ಯದ ಮೂಲಕ ತಿಳಿಸುವಲ್ಲಿ ಸಫಲರಾದರು. ಮೈಸೂರು ವಿಶ್ವಿದ್ಯಾನಿಲಯದ ಕುವೆಂಪು ಕನ್ನಡ ಸಂಸ್ಥೆಯ ವಿದ್ಯಾರ್ಥಿಗಳು ಜನಪದ ಸೊಗಡಿನ ನೃತ್ಯದ ಮೂಲಕ ರಂಜಿಸಿದರು.

ಕಿಕ್ಕಿರಿದು ಸೇರಿದ್ದ ಯುವ ಸಮೂಹ:ಕಾರ್ಯಕ್ರಮದ ಮೊದಲ ದಿನ ಸೇರಿದಂತೆಯೇ ಯುವ ದಸರಾ ಕಾರ್ಯಕ್ರಮದ ಎರಡನೇ ದಿನವೂ ಯುವ ಸಮೂಹವು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿತ್ತು. ಕನ್ನಡ, ಹಿಂದಿ ಹೀಗೆ ವಿವಿಧ ಗೀತೆಗಳಿಗೆ ಕುಣಿದು ಕುಪ್ಪಳಿಸಿ ಯುವ ದಸರಾದ ಸವಿಯನ್ನು ಸವಿದು ಕಣ್ತುಂಬಿಕೊಂಡರು.

Last Updated : 5 hours ago

ABOUT THE AUTHOR

...view details