ಕರ್ನಾಟಕ

karnataka

ETV Bharat / state

ಬೆಂಗಳೂರು: ಆಂಬ್ಯುಲೆನ್ಸ್​​​​ಗೆ ದಾರಿ ಬಿಡದ ಆಟೋ ಚಾಲಕನ ಬಂಧನ, ಬಿಡುಗಡೆ - AUTO DRIVER ARREST RELEASE

ಆಂಬ್ಯುಲೆನ್ಸ್​​ಗೆ ದಾರಿ ಬಿಡದ ಆಟೋ ಚಾಲಕನನ್ನು ಸಂಚಾರ ಠಾಣೆ ಪೊಲೀಸರು ಬಂಧಿಸಿ ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

auto driver arrest
ಆಟೋ ಚಾಲಕನೊಂದಿಗೆ ಪೊಲೀಸರು (ETV Bharat)

By ETV Bharat Karnataka Team

Published : Jan 24, 2025, 8:00 PM IST

ಬೆಂಗಳೂರು:ರಸ್ತೆಯಲ್ಲಿ ಸಂಚರಿಸುವಾಗನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡಾಟ ತೋರಿದ್ದ ಆರೋಪಿ ಆಟೋ ಚಾಲಕನನ್ನು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ.

ಪರಮೇಶ್ ಎಂಬಾತನೆ ಬಂಧಿತನಾಗಿದ್ದ ಆಟೋ ಚಾಲಕ. ಕೂಡ್ಲುನಲ್ಲಿ ವಾಸವಾಗಿರುವ ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ ಹಿಂಬದಿಯಿಂದ ಸೈರನ್ ಮೊಳಗಿಸಿ ಆಂಬ್ಯುಲೆನ್ಸ್ ಬಂದರೂ ಚಾಲಕ ದಾರಿ ಬಿಟ್ಟಿರಲಿಲ್ಲ. ತುರ್ತಾಗಿ ಆಸ್ಪತ್ರೆಗೆ ಹೋಗಬೇಕಾಗಿದ್ದರಿಂದ ದಾರಿ ಮಾಡಿಕೊಡುವಂತೆ ವಾಯ್ಸ್ ಸಂದೇಶ ಮೂಲಕ ತಿಳಿಸಿದರೂ ಕ್ಯಾರೆ ಅನ್ನದೆ ಆಟೊ ಚಾಲನೆ ಮುಂದುವರೆಸಿದ್ದ‌ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಶಾಪಿಂಗ್​ ಮಾಲ್​ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವು

ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಗಮನಿಸಿದ ಬೆಳ್ಳಂದೂರು ಟ್ರಾಫಿಕ್ ಪೊಲೀಸರು ಆಟೋ ನೋಂದಣಿ ಸಂಖ್ಯೆ ಆಧರಿಸಿ ಚಾಲಕನನ್ನು ಬಂಧಿಸಿ ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಲೈಸೆನ್ಸ್ ರದ್ದು ಕೋರಿ ಆರ್​​ಟಿಓಗೆ ಶಿಫಾರಸು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

49 ವರ್ಷದ ಆಟೋ ಚಾಲಕ ಪರಮೇಶ್, ನನಗೆ ಬಿಪಿ ಶುಗರ್ ಇದ್ದು, ಹಿಂಬದಿಯಿಂದ ಆ್ಯಂಬುಲೆನ್ಸ್ ಬರುತ್ತಿರುವುದು ಗೊತ್ತಾಗಿರಲಿಲ್ಲ ಎಂದು ಪೊಲೀಸರ ಮುಂದೆ ಸಮಜಾಯಿಷಿ ನೀಡಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಅಡ್ರೆಸ್ ಕೇಳುವ ನೆಪದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಬಂಧನ

ABOUT THE AUTHOR

...view details