ಕರ್ನಾಟಕ

karnataka

ETV Bharat / state

ಚಾಮರಾಜನಗರ: ಆಹಾರ ಅರಸಿ ಬಂದ ಆನೆ ಮರಿ ವಿದ್ಯುತ್ ಶಾಕ್​ಗೆ ಬಲಿ - ELEPHANT DIED BY ELECTRIC SHOCK

ವಿದ್ಯುತ್​ ಸ್ಪರ್ಶಿಸಿ ಮರಿಯಾನೆ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಆಹಾರ ಅರಸಿ ಬಂದ ಆನೆ ಮರಿ ವಿದ್ಯುತ್ ಶಾಕ್​ಗೆ ಬಲಿ
ಆಹಾರ ಅರಸಿ ಬಂದ ಆನೆ ಮರಿ ವಿದ್ಯುತ್ ಶಾಕ್​ಗೆ ಬಲಿ (ETV Bharat)

By ETV Bharat Karnataka Team

Published : Nov 27, 2024, 1:25 PM IST

ಚಾಮರಾಜನಗರ:ಆಹಾರ ಅರಸಿ ಬಂದ ಆನೆಮರಿಯೊಂದು ವಿದ್ಯುತ್​ ಶಾಕ್​ಗೆ ಪ್ರಾಣ ಕಳೆದುಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ಕಾಡಂಚಿನಲ್ಲಿ ನಡೆದಿದೆ. ಷರೀಪ್​ ಖಾನ್​​ ಎಂಬವರ ಜಮೀನಿನಲ್ಲಿ ಅಕ್ರಮವಾಗಿ ಹರಿಸಿದ್ದ ವಿದ್ಯುತ್​ ತಂತಿಯಿಂದ ಈ ಅವಘಡ ಸಂಭವಿಸಿದೆ. ಮೃತಪಟ್ಟ ಗಂಡು ಆನೆ ಮರಿಗೆ 1ರಿಂದ 2 ವರ್ಷ ಪ್ರಾಯ ಇರಬಹುದು ಎಂದು ಅಂದಾಜಿಸಲಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಮಂಗಲ ಗ್ರಾಮದ
ಹುಲಿಯಮ್ಮನ ಗುಡಿಗೆ ಹೋಗುವ ದಾರಿಯಲ್ಲಿ ಷರೀಪ್ ಎಂಬವರು ತಮ್ಮ ಜಮೀನಿನಲ್ಲಿ ರಾಗಿ ಬೆಳೆದಿದ್ದು, ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದು, ಆನೆ ಮರಿ ವಿದ್ಯುತ್ ಪ್ರವಹಿಸಿ ಅಸುನೀಗಿದೆ.

ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಬೀಟಮ್ಮ ಗ್ಯಾಂಗ್​ನ ಆನೆ ಸಾವು

ABOUT THE AUTHOR

...view details